ಕರ್ನಾಟಕ ಲೋಕಸೇವಾ ಆಯೋಗವು(KPSC) 2023-24ನೇ ಸಾಲಿಗೆ 384 ‘ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್’ (ಕೆಎಎಸ್) ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದೆ.
ಕೆಪಿಎಸ್ ಸಿ ಉಸ್ತುವಾರಿ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿಧಾನ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮಾರ್ಚ್ 4ರಿಂದ ಪ್ರಾರಂಭವಾಗಲಿದ್ದು, ಏಪ್ರಿಲ್ 3ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಶುಲ್ಕ
ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ ₹600, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50 ಮತ್ತು ಎಸ್ಸಿ, ಎಸ್ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಮೇ.5 ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಹುದ್ದೆ
ಕಲ್ಯಾಣ ಕರ್ನಾಟಕ ಗ್ರೂಪ್ (ಹೈ-ಕ) ಹುದ್ದೆಗಳು ಸೇರಿದಂತೆ ಒಟ್ಟು 384 ಹುದ್ದೆಗಳಲ್ಲಿ 159 ‘ಗ್ರೂಪ್-ಎ’ ಹುದ್ದೆಗಳು ಮತ್ತು 225 ‘ಗ್ರೂಪ್-ಬಿ’ ಹುದ್ದೆಗಳಿವೆ.
ವಿದ್ಯಾರ್ಹತೆ
ಕಲ್ಯಾಣ ಕರ್ನಾಟಕ ವೃಂದದ ಒಟ್ಟು 77 ಹುದ್ದೆಗಳಿವೆ. ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ
ಕನಿಷ್ಠ 21 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಲು ಅರ್ಹರು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 38 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ 41 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಪರೀಕ್ಷೆ ವಿಧಾನ
ಈ ನೇಮಕಾತಿಯನ್ನು ಪೂರ್ವಭಾವಿ ಪರೀಕ್ಷೆ (ಬಹು ಆಯ್ಕೆಯ ಮಾದರಿಯ ಪ್ರಶ್ನೆಗಳು), ಮುಖ್ಯ ಪರೀಕ್ಷೆ (ವಿವರಣಾತ್ಮಕ) ಮತ್ತು ವ್ಯಕ್ತಿತ್ವ ಪರೀಕ್ಷೆ ಎಂಬ ಮೂರು ಹಂತಗಳಲ್ಲಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಗಾಗಿ kpsc.kar.nic.in ಗೆ ಭೇಟಿ ನೀಡಬಹುದಾಗಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…