KSRTC: ಅಪಘಾತ‌ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಅಪಘಾತ ರಹಿತವಾಗಿ ಚಾಲನೆ‌ ಮಾಡಿರುವ ಚಾಲಕರಿಗೆ ಬೆಳ್ಳಿ ಪದಕ ಹಾಗೂ ನಗದು ಪುರಸ್ಕಾರ ವಿತರಣೆ ಮಾಡಿ ಗೌರವಿಸಲಾಯಿತು.

ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪಡೆದ ಹೆಸರು ಈ ಕೆಳಕಂಡಂತಿದೆ.

1. ಕೃಷ್ಣಪ್ಪ ಕೆ ಎನ್ (2350)

2. ನಿಂಗಪ್ಪ ಗುಡ್ಡದಕೇರಿ (2557)

3. ರಾಮಕೃಷ್ಣ ಜೆ (3832)

4. ಬಸವರಾಜು (3852)

5. ನಾರಾಯಣಸ್ವಾಮಿ ಎಂ ಎನ್ (4166)

6. ರಂಜಿತ್ ಕುಮಾರ್ (7977)

7. ರಾಮಾಂಜಿನಪ್ಪ ಕೆ (18417)

8. ಶ್ರೀನಿವಾಸ ಎಂ (27056)

9. ವಿಜಯ ಕುಮಾರ್ ಎಂ (534)

10. ಮಹಾಂತೇಶ್ ಗದ್ದಿ (545)

ಇಂದು ಚಿಕ್ಕಬಳ್ಳಾಪುರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳ್ಳಿ ಪದಕ ವಿತರಣಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರವೀಂದ್ರ ಅವರಿಂದ ಪ್ರಶಸ್ತಿ ಪ್ರದಾನ ನಡೆಯಿತು.

ವೈದ್ಯನ ಜಾಗರೂಕತೆಯಿಂದ ಒಬ್ಬ ರೋಗಿಯ ಪ್ರಾಣ ಉಳಿಸಬಹುದು, ಆದರೆ ಬಸ್‌ ಚಾಲಕ ಕೈಯಲ್ಲಿ ನೂರಾರು ಮಂದಿ ಪ್ರಯಾಣಿಕರ ಪ್ರಾಣ ಇರುತ್ತದೆ. ಪ್ರತಿಯೊಬ್ಬರ ಪ್ರಾಣ ತನ್ನ ಪ್ರಾಣದಂತೆ ಭಾವಿಸಿ ಎಚ್ಚರಿಕೆಯಿಂದ ಬಸ್ ಚಾಲನೆ ಮಾಡುತ್ತಾನೆ. ಅಂತಹವರಿಗೆ ನಾವು ಗೌರವಿಸಲೇಬೇಕು. ಇವರ ಸಾಧನೆ ಇತರೆ ನೌಕರರಿಗೆ ಮಾದರಿಯಾಗಬೇಕು. ಚಾಲಕ ವೃತ್ತಿ ಎನ್ನುವುದು ಒಂದು ಜವಾಬ್ಧಾರಿ ಕೆಲಸ, ಇದನ್ನು ಸಮರ್ಥವಾಗಿ ನಿಭಾಯಿಸಬೇಕು.

ಈ ವೇಳೆ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಧಿಕಾರಿ ಹಿಮವರ್ಧನ ನಾಯ್ಡು, ವಿಭಾಗೀಯ ಯಾಂತ್ರಿಕ ಅಭಿಯಂತರಾದ ಎಂ.ಸಿ.ಕೆಳಗೇರಿ, ವಿಭಾಗೀಯ ಸಂಚಾರ ಅಧಿಕಾರಿ ಮಂಜುನಾಥ, ಉಗ್ರಾಣಾಧಿಕಾರಿ ವೆಂಕಟರಮಣಪ್ಪ, ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಸಂತೋಷ್ ಎಸ್.ಆರ್ ಸೇರಿದಂತೆ ವಿಭಾಗದ ಎಲ್ಲಾ ಅಧಿಕಾರಿಗಳು ಹಾಗೂ ಘಟಕ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

1 hour ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

2 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

2 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

6 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

17 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

18 hours ago