KSRTC: ಅಪಘಾತ‌ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಅಪಘಾತ ರಹಿತವಾಗಿ ಚಾಲನೆ‌ ಮಾಡಿರುವ ಚಾಲಕರಿಗೆ ಬೆಳ್ಳಿ ಪದಕ ಹಾಗೂ ನಗದು ಪುರಸ್ಕಾರ ವಿತರಣೆ ಮಾಡಿ ಗೌರವಿಸಲಾಯಿತು.

ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪಡೆದ ಹೆಸರು ಈ ಕೆಳಕಂಡಂತಿದೆ.

1. ಕೃಷ್ಣಪ್ಪ ಕೆ ಎನ್ (2350)

2. ನಿಂಗಪ್ಪ ಗುಡ್ಡದಕೇರಿ (2557)

3. ರಾಮಕೃಷ್ಣ ಜೆ (3832)

4. ಬಸವರಾಜು (3852)

5. ನಾರಾಯಣಸ್ವಾಮಿ ಎಂ ಎನ್ (4166)

6. ರಂಜಿತ್ ಕುಮಾರ್ (7977)

7. ರಾಮಾಂಜಿನಪ್ಪ ಕೆ (18417)

8. ಶ್ರೀನಿವಾಸ ಎಂ (27056)

9. ವಿಜಯ ಕುಮಾರ್ ಎಂ (534)

10. ಮಹಾಂತೇಶ್ ಗದ್ದಿ (545)

ಇಂದು ಚಿಕ್ಕಬಳ್ಳಾಪುರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳ್ಳಿ ಪದಕ ವಿತರಣಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರವೀಂದ್ರ ಅವರಿಂದ ಪ್ರಶಸ್ತಿ ಪ್ರದಾನ ನಡೆಯಿತು.

ವೈದ್ಯನ ಜಾಗರೂಕತೆಯಿಂದ ಒಬ್ಬ ರೋಗಿಯ ಪ್ರಾಣ ಉಳಿಸಬಹುದು, ಆದರೆ ಬಸ್‌ ಚಾಲಕ ಕೈಯಲ್ಲಿ ನೂರಾರು ಮಂದಿ ಪ್ರಯಾಣಿಕರ ಪ್ರಾಣ ಇರುತ್ತದೆ. ಪ್ರತಿಯೊಬ್ಬರ ಪ್ರಾಣ ತನ್ನ ಪ್ರಾಣದಂತೆ ಭಾವಿಸಿ ಎಚ್ಚರಿಕೆಯಿಂದ ಬಸ್ ಚಾಲನೆ ಮಾಡುತ್ತಾನೆ. ಅಂತಹವರಿಗೆ ನಾವು ಗೌರವಿಸಲೇಬೇಕು. ಇವರ ಸಾಧನೆ ಇತರೆ ನೌಕರರಿಗೆ ಮಾದರಿಯಾಗಬೇಕು. ಚಾಲಕ ವೃತ್ತಿ ಎನ್ನುವುದು ಒಂದು ಜವಾಬ್ಧಾರಿ ಕೆಲಸ, ಇದನ್ನು ಸಮರ್ಥವಾಗಿ ನಿಭಾಯಿಸಬೇಕು.

ಈ ವೇಳೆ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಧಿಕಾರಿ ಹಿಮವರ್ಧನ ನಾಯ್ಡು, ವಿಭಾಗೀಯ ಯಾಂತ್ರಿಕ ಅಭಿಯಂತರಾದ ಎಂ.ಸಿ.ಕೆಳಗೇರಿ, ವಿಭಾಗೀಯ ಸಂಚಾರ ಅಧಿಕಾರಿ ಮಂಜುನಾಥ, ಉಗ್ರಾಣಾಧಿಕಾರಿ ವೆಂಕಟರಮಣಪ್ಪ, ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಸಂತೋಷ್ ಎಸ್.ಆರ್ ಸೇರಿದಂತೆ ವಿಭಾಗದ ಎಲ್ಲಾ ಅಧಿಕಾರಿಗಳು ಹಾಗೂ ಘಟಕ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

12 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

20 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

23 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

23 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago