ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಅಪಘಾತ ರಹಿತವಾಗಿ ಚಾಲನೆ ಮಾಡಿರುವ ಚಾಲಕರಿಗೆ ಬೆಳ್ಳಿ ಪದಕ ಹಾಗೂ ನಗದು ಪುರಸ್ಕಾರ ವಿತರಣೆ ಮಾಡಿ ಗೌರವಿಸಲಾಯಿತು.
ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
1. ಕೃಷ್ಣಪ್ಪ ಕೆ ಎನ್ (2350)
2. ನಿಂಗಪ್ಪ ಗುಡ್ಡದಕೇರಿ (2557)
3. ರಾಮಕೃಷ್ಣ ಜೆ (3832)
4. ಬಸವರಾಜು (3852)
5. ನಾರಾಯಣಸ್ವಾಮಿ ಎಂ ಎನ್ (4166)
6. ರಂಜಿತ್ ಕುಮಾರ್ (7977)
7. ರಾಮಾಂಜಿನಪ್ಪ ಕೆ (18417)
8. ಶ್ರೀನಿವಾಸ ಎಂ (27056)
9. ವಿಜಯ ಕುಮಾರ್ ಎಂ (534)
10. ಮಹಾಂತೇಶ್ ಗದ್ದಿ (545)
ಇಂದು ಚಿಕ್ಕಬಳ್ಳಾಪುರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳ್ಳಿ ಪದಕ ವಿತರಣಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರವೀಂದ್ರ ಅವರಿಂದ ಪ್ರಶಸ್ತಿ ಪ್ರದಾನ ನಡೆಯಿತು.
ವೈದ್ಯನ ಜಾಗರೂಕತೆಯಿಂದ ಒಬ್ಬ ರೋಗಿಯ ಪ್ರಾಣ ಉಳಿಸಬಹುದು, ಆದರೆ ಬಸ್ ಚಾಲಕ ಕೈಯಲ್ಲಿ ನೂರಾರು ಮಂದಿ ಪ್ರಯಾಣಿಕರ ಪ್ರಾಣ ಇರುತ್ತದೆ. ಪ್ರತಿಯೊಬ್ಬರ ಪ್ರಾಣ ತನ್ನ ಪ್ರಾಣದಂತೆ ಭಾವಿಸಿ ಎಚ್ಚರಿಕೆಯಿಂದ ಬಸ್ ಚಾಲನೆ ಮಾಡುತ್ತಾನೆ. ಅಂತಹವರಿಗೆ ನಾವು ಗೌರವಿಸಲೇಬೇಕು. ಇವರ ಸಾಧನೆ ಇತರೆ ನೌಕರರಿಗೆ ಮಾದರಿಯಾಗಬೇಕು. ಚಾಲಕ ವೃತ್ತಿ ಎನ್ನುವುದು ಒಂದು ಜವಾಬ್ಧಾರಿ ಕೆಲಸ, ಇದನ್ನು ಸಮರ್ಥವಾಗಿ ನಿಭಾಯಿಸಬೇಕು.
ಈ ವೇಳೆ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಧಿಕಾರಿ ಹಿಮವರ್ಧನ ನಾಯ್ಡು, ವಿಭಾಗೀಯ ಯಾಂತ್ರಿಕ ಅಭಿಯಂತರಾದ ಎಂ.ಸಿ.ಕೆಳಗೇರಿ, ವಿಭಾಗೀಯ ಸಂಚಾರ ಅಧಿಕಾರಿ ಮಂಜುನಾಥ, ಉಗ್ರಾಣಾಧಿಕಾರಿ ವೆಂಕಟರಮಣಪ್ಪ, ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಸಂತೋಷ್ ಎಸ್.ಆರ್ ಸೇರಿದಂತೆ ವಿಭಾಗದ ಎಲ್ಲಾ ಅಧಿಕಾರಿಗಳು ಹಾಗೂ ಘಟಕ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…