KSRTC: ಅಪಘಾತ‌ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಅಪಘಾತ ರಹಿತವಾಗಿ ಚಾಲನೆ‌ ಮಾಡಿರುವ ಚಾಲಕರಿಗೆ ಬೆಳ್ಳಿ ಪದಕ ಹಾಗೂ ನಗದು ಪುರಸ್ಕಾರ ವಿತರಣೆ ಮಾಡಿ ಗೌರವಿಸಲಾಯಿತು.

ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪಡೆದ ಹೆಸರು ಈ ಕೆಳಕಂಡಂತಿದೆ.

1. ಕೃಷ್ಣಪ್ಪ ಕೆ ಎನ್ (2350)

2. ನಿಂಗಪ್ಪ ಗುಡ್ಡದಕೇರಿ (2557)

3. ರಾಮಕೃಷ್ಣ ಜೆ (3832)

4. ಬಸವರಾಜು (3852)

5. ನಾರಾಯಣಸ್ವಾಮಿ ಎಂ ಎನ್ (4166)

6. ರಂಜಿತ್ ಕುಮಾರ್ (7977)

7. ರಾಮಾಂಜಿನಪ್ಪ ಕೆ (18417)

8. ಶ್ರೀನಿವಾಸ ಎಂ (27056)

9. ವಿಜಯ ಕುಮಾರ್ ಎಂ (534)

10. ಮಹಾಂತೇಶ್ ಗದ್ದಿ (545)

ಇಂದು ಚಿಕ್ಕಬಳ್ಳಾಪುರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳ್ಳಿ ಪದಕ ವಿತರಣಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರವೀಂದ್ರ ಅವರಿಂದ ಪ್ರಶಸ್ತಿ ಪ್ರದಾನ ನಡೆಯಿತು.

ವೈದ್ಯನ ಜಾಗರೂಕತೆಯಿಂದ ಒಬ್ಬ ರೋಗಿಯ ಪ್ರಾಣ ಉಳಿಸಬಹುದು, ಆದರೆ ಬಸ್‌ ಚಾಲಕ ಕೈಯಲ್ಲಿ ನೂರಾರು ಮಂದಿ ಪ್ರಯಾಣಿಕರ ಪ್ರಾಣ ಇರುತ್ತದೆ. ಪ್ರತಿಯೊಬ್ಬರ ಪ್ರಾಣ ತನ್ನ ಪ್ರಾಣದಂತೆ ಭಾವಿಸಿ ಎಚ್ಚರಿಕೆಯಿಂದ ಬಸ್ ಚಾಲನೆ ಮಾಡುತ್ತಾನೆ. ಅಂತಹವರಿಗೆ ನಾವು ಗೌರವಿಸಲೇಬೇಕು. ಇವರ ಸಾಧನೆ ಇತರೆ ನೌಕರರಿಗೆ ಮಾದರಿಯಾಗಬೇಕು. ಚಾಲಕ ವೃತ್ತಿ ಎನ್ನುವುದು ಒಂದು ಜವಾಬ್ಧಾರಿ ಕೆಲಸ, ಇದನ್ನು ಸಮರ್ಥವಾಗಿ ನಿಭಾಯಿಸಬೇಕು.

ಈ ವೇಳೆ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಧಿಕಾರಿ ಹಿಮವರ್ಧನ ನಾಯ್ಡು, ವಿಭಾಗೀಯ ಯಾಂತ್ರಿಕ ಅಭಿಯಂತರಾದ ಎಂ.ಸಿ.ಕೆಳಗೇರಿ, ವಿಭಾಗೀಯ ಸಂಚಾರ ಅಧಿಕಾರಿ ಮಂಜುನಾಥ, ಉಗ್ರಾಣಾಧಿಕಾರಿ ವೆಂಕಟರಮಣಪ್ಪ, ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಸಂತೋಷ್ ಎಸ್.ಆರ್ ಸೇರಿದಂತೆ ವಿಭಾಗದ ಎಲ್ಲಾ ಅಧಿಕಾರಿಗಳು ಹಾಗೂ ಘಟಕ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago