KSRTC: ಅಪಘಾತ‌ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಅಪಘಾತ ರಹಿತವಾಗಿ ಚಾಲನೆ‌ ಮಾಡಿರುವ ಚಾಲಕರಿಗೆ ಬೆಳ್ಳಿ ಪದಕ ಹಾಗೂ ನಗದು ಪುರಸ್ಕಾರ ವಿತರಣೆ ಮಾಡಿ ಗೌರವಿಸಲಾಯಿತು.

ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪಡೆದ ಹೆಸರು ಈ ಕೆಳಕಂಡಂತಿದೆ.

1. ಕೃಷ್ಣಪ್ಪ ಕೆ ಎನ್ (2350)

2. ನಿಂಗಪ್ಪ ಗುಡ್ಡದಕೇರಿ (2557)

3. ರಾಮಕೃಷ್ಣ ಜೆ (3832)

4. ಬಸವರಾಜು (3852)

5. ನಾರಾಯಣಸ್ವಾಮಿ ಎಂ ಎನ್ (4166)

6. ರಂಜಿತ್ ಕುಮಾರ್ (7977)

7. ರಾಮಾಂಜಿನಪ್ಪ ಕೆ (18417)

8. ಶ್ರೀನಿವಾಸ ಎಂ (27056)

9. ವಿಜಯ ಕುಮಾರ್ ಎಂ (534)

10. ಮಹಾಂತೇಶ್ ಗದ್ದಿ (545)

ಇಂದು ಚಿಕ್ಕಬಳ್ಳಾಪುರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳ್ಳಿ ಪದಕ ವಿತರಣಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರವೀಂದ್ರ ಅವರಿಂದ ಪ್ರಶಸ್ತಿ ಪ್ರದಾನ ನಡೆಯಿತು.

ವೈದ್ಯನ ಜಾಗರೂಕತೆಯಿಂದ ಒಬ್ಬ ರೋಗಿಯ ಪ್ರಾಣ ಉಳಿಸಬಹುದು, ಆದರೆ ಬಸ್‌ ಚಾಲಕ ಕೈಯಲ್ಲಿ ನೂರಾರು ಮಂದಿ ಪ್ರಯಾಣಿಕರ ಪ್ರಾಣ ಇರುತ್ತದೆ. ಪ್ರತಿಯೊಬ್ಬರ ಪ್ರಾಣ ತನ್ನ ಪ್ರಾಣದಂತೆ ಭಾವಿಸಿ ಎಚ್ಚರಿಕೆಯಿಂದ ಬಸ್ ಚಾಲನೆ ಮಾಡುತ್ತಾನೆ. ಅಂತಹವರಿಗೆ ನಾವು ಗೌರವಿಸಲೇಬೇಕು. ಇವರ ಸಾಧನೆ ಇತರೆ ನೌಕರರಿಗೆ ಮಾದರಿಯಾಗಬೇಕು. ಚಾಲಕ ವೃತ್ತಿ ಎನ್ನುವುದು ಒಂದು ಜವಾಬ್ಧಾರಿ ಕೆಲಸ, ಇದನ್ನು ಸಮರ್ಥವಾಗಿ ನಿಭಾಯಿಸಬೇಕು.

ಈ ವೇಳೆ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಧಿಕಾರಿ ಹಿಮವರ್ಧನ ನಾಯ್ಡು, ವಿಭಾಗೀಯ ಯಾಂತ್ರಿಕ ಅಭಿಯಂತರಾದ ಎಂ.ಸಿ.ಕೆಳಗೇರಿ, ವಿಭಾಗೀಯ ಸಂಚಾರ ಅಧಿಕಾರಿ ಮಂಜುನಾಥ, ಉಗ್ರಾಣಾಧಿಕಾರಿ ವೆಂಕಟರಮಣಪ್ಪ, ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಸಂತೋಷ್ ಎಸ್.ಆರ್ ಸೇರಿದಂತೆ ವಿಭಾಗದ ಎಲ್ಲಾ ಅಧಿಕಾರಿಗಳು ಹಾಗೂ ಘಟಕ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 hour ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

2 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

2 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

3 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

6 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

6 hours ago