KSRTC: ಅಪಘಾತ‌ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಅಪಘಾತ ರಹಿತವಾಗಿ ಚಾಲನೆ‌ ಮಾಡಿರುವ ಚಾಲಕರಿಗೆ ಬೆಳ್ಳಿ ಪದಕ ಹಾಗೂ ನಗದು ಪುರಸ್ಕಾರ ವಿತರಣೆ ಮಾಡಿ ಗೌರವಿಸಲಾಯಿತು.

ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪಡೆದ ಹೆಸರು ಈ ಕೆಳಕಂಡಂತಿದೆ.

1. ಕೃಷ್ಣಪ್ಪ ಕೆ ಎನ್ (2350)

2. ನಿಂಗಪ್ಪ ಗುಡ್ಡದಕೇರಿ (2557)

3. ರಾಮಕೃಷ್ಣ ಜೆ (3832)

4. ಬಸವರಾಜು (3852)

5. ನಾರಾಯಣಸ್ವಾಮಿ ಎಂ ಎನ್ (4166)

6. ರಂಜಿತ್ ಕುಮಾರ್ (7977)

7. ರಾಮಾಂಜಿನಪ್ಪ ಕೆ (18417)

8. ಶ್ರೀನಿವಾಸ ಎಂ (27056)

9. ವಿಜಯ ಕುಮಾರ್ ಎಂ (534)

10. ಮಹಾಂತೇಶ್ ಗದ್ದಿ (545)

ಇಂದು ಚಿಕ್ಕಬಳ್ಳಾಪುರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳ್ಳಿ ಪದಕ ವಿತರಣಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರವೀಂದ್ರ ಅವರಿಂದ ಪ್ರಶಸ್ತಿ ಪ್ರದಾನ ನಡೆಯಿತು.

ವೈದ್ಯನ ಜಾಗರೂಕತೆಯಿಂದ ಒಬ್ಬ ರೋಗಿಯ ಪ್ರಾಣ ಉಳಿಸಬಹುದು, ಆದರೆ ಬಸ್‌ ಚಾಲಕ ಕೈಯಲ್ಲಿ ನೂರಾರು ಮಂದಿ ಪ್ರಯಾಣಿಕರ ಪ್ರಾಣ ಇರುತ್ತದೆ. ಪ್ರತಿಯೊಬ್ಬರ ಪ್ರಾಣ ತನ್ನ ಪ್ರಾಣದಂತೆ ಭಾವಿಸಿ ಎಚ್ಚರಿಕೆಯಿಂದ ಬಸ್ ಚಾಲನೆ ಮಾಡುತ್ತಾನೆ. ಅಂತಹವರಿಗೆ ನಾವು ಗೌರವಿಸಲೇಬೇಕು. ಇವರ ಸಾಧನೆ ಇತರೆ ನೌಕರರಿಗೆ ಮಾದರಿಯಾಗಬೇಕು. ಚಾಲಕ ವೃತ್ತಿ ಎನ್ನುವುದು ಒಂದು ಜವಾಬ್ಧಾರಿ ಕೆಲಸ, ಇದನ್ನು ಸಮರ್ಥವಾಗಿ ನಿಭಾಯಿಸಬೇಕು.

ಈ ವೇಳೆ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಧಿಕಾರಿ ಹಿಮವರ್ಧನ ನಾಯ್ಡು, ವಿಭಾಗೀಯ ಯಾಂತ್ರಿಕ ಅಭಿಯಂತರಾದ ಎಂ.ಸಿ.ಕೆಳಗೇರಿ, ವಿಭಾಗೀಯ ಸಂಚಾರ ಅಧಿಕಾರಿ ಮಂಜುನಾಥ, ಉಗ್ರಾಣಾಧಿಕಾರಿ ವೆಂಕಟರಮಣಪ್ಪ, ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಸಂತೋಷ್ ಎಸ್.ಆರ್ ಸೇರಿದಂತೆ ವಿಭಾಗದ ಎಲ್ಲಾ ಅಧಿಕಾರಿಗಳು ಹಾಗೂ ಘಟಕ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

9 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

13 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago