ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಅಪಘಾತ ರಹಿತವಾಗಿ ಚಾಲನೆ ಮಾಡಿರುವ ಚಾಲಕರಿಗೆ ಬೆಳ್ಳಿ ಪದಕ ಹಾಗೂ ನಗದು ಪುರಸ್ಕಾರ ವಿತರಣೆ ಮಾಡಿ ಗೌರವಿಸಲಾಯಿತು.
ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
1. ಕೃಷ್ಣಪ್ಪ ಕೆ ಎನ್ (2350)
2. ನಿಂಗಪ್ಪ ಗುಡ್ಡದಕೇರಿ (2557)
3. ರಾಮಕೃಷ್ಣ ಜೆ (3832)
4. ಬಸವರಾಜು (3852)
5. ನಾರಾಯಣಸ್ವಾಮಿ ಎಂ ಎನ್ (4166)
6. ರಂಜಿತ್ ಕುಮಾರ್ (7977)
7. ರಾಮಾಂಜಿನಪ್ಪ ಕೆ (18417)
8. ಶ್ರೀನಿವಾಸ ಎಂ (27056)
9. ವಿಜಯ ಕುಮಾರ್ ಎಂ (534)
10. ಮಹಾಂತೇಶ್ ಗದ್ದಿ (545)
ಇಂದು ಚಿಕ್ಕಬಳ್ಳಾಪುರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳ್ಳಿ ಪದಕ ವಿತರಣಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರವೀಂದ್ರ ಅವರಿಂದ ಪ್ರಶಸ್ತಿ ಪ್ರದಾನ ನಡೆಯಿತು.
ವೈದ್ಯನ ಜಾಗರೂಕತೆಯಿಂದ ಒಬ್ಬ ರೋಗಿಯ ಪ್ರಾಣ ಉಳಿಸಬಹುದು, ಆದರೆ ಬಸ್ ಚಾಲಕ ಕೈಯಲ್ಲಿ ನೂರಾರು ಮಂದಿ ಪ್ರಯಾಣಿಕರ ಪ್ರಾಣ ಇರುತ್ತದೆ. ಪ್ರತಿಯೊಬ್ಬರ ಪ್ರಾಣ ತನ್ನ ಪ್ರಾಣದಂತೆ ಭಾವಿಸಿ ಎಚ್ಚರಿಕೆಯಿಂದ ಬಸ್ ಚಾಲನೆ ಮಾಡುತ್ತಾನೆ. ಅಂತಹವರಿಗೆ ನಾವು ಗೌರವಿಸಲೇಬೇಕು. ಇವರ ಸಾಧನೆ ಇತರೆ ನೌಕರರಿಗೆ ಮಾದರಿಯಾಗಬೇಕು. ಚಾಲಕ ವೃತ್ತಿ ಎನ್ನುವುದು ಒಂದು ಜವಾಬ್ಧಾರಿ ಕೆಲಸ, ಇದನ್ನು ಸಮರ್ಥವಾಗಿ ನಿಭಾಯಿಸಬೇಕು.
ಈ ವೇಳೆ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಧಿಕಾರಿ ಹಿಮವರ್ಧನ ನಾಯ್ಡು, ವಿಭಾಗೀಯ ಯಾಂತ್ರಿಕ ಅಭಿಯಂತರಾದ ಎಂ.ಸಿ.ಕೆಳಗೇರಿ, ವಿಭಾಗೀಯ ಸಂಚಾರ ಅಧಿಕಾರಿ ಮಂಜುನಾಥ, ಉಗ್ರಾಣಾಧಿಕಾರಿ ವೆಂಕಟರಮಣಪ್ಪ, ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಸಂತೋಷ್ ಎಸ್.ಆರ್ ಸೇರಿದಂತೆ ವಿಭಾಗದ ಎಲ್ಲಾ ಅಧಿಕಾರಿಗಳು ಹಾಗೂ ಘಟಕ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…
Ставки на спорт UA: советы и стратегии для успеха Ставки на спорт в Украине: основы…