ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ.
ಕೋಲಾರದಿಂದ ಧರ್ಮಸ್ಥಳ ಮಾರ್ಗವಾಗಿ ಸಂಚರಿಸುತ್ತಿದ್ದ KSRTC ಬಸ್ಗೆ, ಯೂ-ಟರ್ನ್ ಪಡೆಯುತ್ತಿದ್ದ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬಸ್ನ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಸಕೋಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.
ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…