KSRTC ಬಸ್ ನಲ್ಲಿ ಮಹಿಳೆಯ ಚಿನ್ನಾಭರಣ ಕಳವು: ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿದ ಐನಾತಿ ಕಳ್ಳರು

ನ.6ರಂದು ಉಡುಪಿಯಲ್ಲಿ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಬಂದು ಕಾವೇರಿಭವನ‌ ಬಸ್ ನಿಲ್ದಾಣದಲ್ಲಿ ದೊಡ್ಡಬಳ್ಳಾಪುರ ಬಸ್ ಹತ್ತಿ ಬರುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿರುವ ಘಟನೆ ನಡೆದಿದೆ.

ತಾಲೂಕಿನ ನೆಲ್ಲುಕುಂಟೆ ಗ್ರಾಮದ ನಿವಾಸಿ ಪುಷ್ಪಾವತಿ ಚಿನ್ನದ ಒಡವೆಗಳನ್ನ‌ ಕಳೆದುಕೊಂಡ ಗೃಹಿಣಿ. ಉಡುಪಿಯಲ್ಲಿ ಸಂಬಂಧಿಕರ ಮದುವೆಗೆ ಚಿನ್ನದ ಒಡವೆಗಳನ್ನ ಹಾಕಿಕೊಂಡು ಹೋಗಿದ್ದರು. ಮದುವೆ ನಂತರ ಧರಿಸಿದ್ದ ಸುಮಾರು 33 ಗ್ರಾಂ ಚಿನ್ನದ ಲಾಂಗ್ ಚೈನ್, 31 ಗ್ರಾಂ ನೆಕ್ಲೆಸ್, 10 ಗ್ರಾಂ ವಾಲೆ ಜುಮುಕಿ, 8 ಗ್ರಾಂ ಮಾಟಿ, 3ಗ್ರಾಂನ‌ ಎರಡು ಚಿನ್ನದ ಉಂಗುರಗಳನ್ನು ತೆಗದು ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದರು. ಸಾರಿಗೆ ಬಸ್ ನಲ್ಲಿ ದೊಡ್ಡಬಳ್ಳಾಪುರಕ್ಕೆ ಬರುವ ಮಾರ್ಗಮಧ್ಯೆದಲ್ಲಿ ವ್ಯಾನಿಟಿ‌ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಆಭರಣಗಳನ್ನ ಕಳ್ಳರು ಕದ್ದೋಯ್ದಿದ್ದಾರೆ.

ನಾನು, ನನ್ನ ಮಗಳು, ನಮ್ಮ ಚಿಕ್ಕಮ್ಮ ಕಾಮಾಕ್ಷಿಪಾಳ್ಯದಲ್ಲಿರುವ ಸಂಬಂಧಿಕರ ಮನೆಯಿಂದ ಕಾವೇರಿ ಭವನ ಬಸ್ ನಿಲ್ದಾಣಕ್ಕೆ ಆಟೋದಲ್ಲಿ ಬಂದು ದೊಡ್ಡಬಳ್ಳಾಪುರಕ್ಕೆ ಬರುವ ಕೆಎಸ್ ಆರ್ ಟಿಸಿ ಬಸ್ ಹತ್ತಿ ಕುಳಿತೆವು, ಬಸ್ಸಿನಲ್ಲಿ ಹೆಚ್ಚು ಪ್ರಯಾಣಿಕರು ಇರಲಿಲ್ಲ, ನಮ್ಮ ಅಕ್ಕಪಕ್ಕ ಆಸನಗಳಲ್ಲಿ ಮಹಿಳೆಯರು ಕುಳಿತಿದ್ದರು, ಚಿನ್ನಾಭರಣ ಇದ್ದ ವ್ಯಾನಿಟಿ‌ ಬ್ಯಾಗ್ ನನ್ನ ಬಳಿಯೇ ಇತ್ತು, ನಾವು ಮೂರು ಜನ ಸ್ವಲ್ಪ ದೂರದವರೆಗೆ ನಿದ್ದೆ ಮಾಡಿದೆವು, ವ್ಯಾನಿಟಿ ಬ್ಯಾಗಿನೊಳಗೆ ಚಿಕ್ಕ ಪೊಟ್ಟಣದಲ್ಲಿ ನನ್ನ ಎಲ್ಲಾ ಚಿನ್ನಾಭರಣ‌ ಇಟ್ಟಿದ್ದೆ, ಹಣವನ್ನ ಅಲ್ಲೇ ಬಿಟ್ಟು ಒಡವೆಗಳನ್ನು ನಮಗೆ ಅರಿವಿಗೆ ಬಾರದ ರೀತಿಯಲ್ಲಿ ಯಾರೋ ಕದ್ದಿದ್ದಾರೆ. ದೊಡ್ಡಬಳ್ಳಾಪುರ ಬಸ್ ನಿಲ್ದಾಣದಲ್ಲಿ ಬಂದು ಇಳಿದು ಹೂ ತೆಗೆದುಕೊಳ್ಳಲು ವ್ಯಾನಿಟಿ ಬ್ಯಾಗ್ ತೆಗೆದು ನೋಡಿದಾಗ ಒಡವೆಗಳು ಕಳವು ಆಗಿರುವುದು ಗೊತ್ತಾಯಿತು ಎಂದು ಒಡವೆಗಳನ್ನ ಕಳೆದುಕೊಂಡ ಪುಷ್ಪಾವತಿ ತಿಳಿಸಿದ್ದಾರೆ.

ನನಗೆ ನಾಲ್ಕು ಮಂದಿ ಹೆಣ್ಣು ಮಕ್ಕಳು, ನನ್ನ ಗಂಡ ಅಡುಗೆ ಕೆಲಸ ಮಾಡಿ ಕೂಡಿಟ್ಟ ಹಣದಲ್ಲಿ ಆಭರಣಗಳನ್ನು ಮಾಡಿಸಿದ್ದೇವು. ಈ ಆಭರಣಗಳು‌ ನಮ್ಮ ಜೀವನಕ್ಕೆ ಆಧಾರವಾಗಿದ್ದವು. ಈಗ ಅವೂ ಇಲ್ಲದಾಗಿದೆ. ಚಿನ್ನಾಭರಣಗಳ ಕಳವು ಕುರಿತು ನಗರ ಠಾಣೆಯಲ್ಲಿ ದೂರು‌ ನೀಡಿದ್ದೇವೆ. ದಯವಿಟ್ಟು ನಮಗೆ ನಮ್ಮ ಒಡವೆಗಳನ್ನು ಪತ್ತೆ ಮಾಡಿಕೊಡಬೇಕೆಂದು ವಿನಂತಿಸಿಕೊಂಡರು.

Ramesh Babu

Journalist

Recent Posts

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

2 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

10 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

15 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

18 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

19 hours ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

19 hours ago