KSRTC ಬಸ್ ನಲ್ಲಿ ಮಹಿಳೆಯ ಚಿನ್ನಾಭರಣ ಕಳವು: ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿದ ಐನಾತಿ ಕಳ್ಳರು

ನ.6ರಂದು ಉಡುಪಿಯಲ್ಲಿ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಬಂದು ಕಾವೇರಿಭವನ‌ ಬಸ್ ನಿಲ್ದಾಣದಲ್ಲಿ ದೊಡ್ಡಬಳ್ಳಾಪುರ ಬಸ್ ಹತ್ತಿ ಬರುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿರುವ ಘಟನೆ ನಡೆದಿದೆ.

ತಾಲೂಕಿನ ನೆಲ್ಲುಕುಂಟೆ ಗ್ರಾಮದ ನಿವಾಸಿ ಪುಷ್ಪಾವತಿ ಚಿನ್ನದ ಒಡವೆಗಳನ್ನ‌ ಕಳೆದುಕೊಂಡ ಗೃಹಿಣಿ. ಉಡುಪಿಯಲ್ಲಿ ಸಂಬಂಧಿಕರ ಮದುವೆಗೆ ಚಿನ್ನದ ಒಡವೆಗಳನ್ನ ಹಾಕಿಕೊಂಡು ಹೋಗಿದ್ದರು. ಮದುವೆ ನಂತರ ಧರಿಸಿದ್ದ ಸುಮಾರು 33 ಗ್ರಾಂ ಚಿನ್ನದ ಲಾಂಗ್ ಚೈನ್, 31 ಗ್ರಾಂ ನೆಕ್ಲೆಸ್, 10 ಗ್ರಾಂ ವಾಲೆ ಜುಮುಕಿ, 8 ಗ್ರಾಂ ಮಾಟಿ, 3ಗ್ರಾಂನ‌ ಎರಡು ಚಿನ್ನದ ಉಂಗುರಗಳನ್ನು ತೆಗದು ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದರು. ಸಾರಿಗೆ ಬಸ್ ನಲ್ಲಿ ದೊಡ್ಡಬಳ್ಳಾಪುರಕ್ಕೆ ಬರುವ ಮಾರ್ಗಮಧ್ಯೆದಲ್ಲಿ ವ್ಯಾನಿಟಿ‌ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಆಭರಣಗಳನ್ನ ಕಳ್ಳರು ಕದ್ದೋಯ್ದಿದ್ದಾರೆ.

ನಾನು, ನನ್ನ ಮಗಳು, ನಮ್ಮ ಚಿಕ್ಕಮ್ಮ ಕಾಮಾಕ್ಷಿಪಾಳ್ಯದಲ್ಲಿರುವ ಸಂಬಂಧಿಕರ ಮನೆಯಿಂದ ಕಾವೇರಿ ಭವನ ಬಸ್ ನಿಲ್ದಾಣಕ್ಕೆ ಆಟೋದಲ್ಲಿ ಬಂದು ದೊಡ್ಡಬಳ್ಳಾಪುರಕ್ಕೆ ಬರುವ ಕೆಎಸ್ ಆರ್ ಟಿಸಿ ಬಸ್ ಹತ್ತಿ ಕುಳಿತೆವು, ಬಸ್ಸಿನಲ್ಲಿ ಹೆಚ್ಚು ಪ್ರಯಾಣಿಕರು ಇರಲಿಲ್ಲ, ನಮ್ಮ ಅಕ್ಕಪಕ್ಕ ಆಸನಗಳಲ್ಲಿ ಮಹಿಳೆಯರು ಕುಳಿತಿದ್ದರು, ಚಿನ್ನಾಭರಣ ಇದ್ದ ವ್ಯಾನಿಟಿ‌ ಬ್ಯಾಗ್ ನನ್ನ ಬಳಿಯೇ ಇತ್ತು, ನಾವು ಮೂರು ಜನ ಸ್ವಲ್ಪ ದೂರದವರೆಗೆ ನಿದ್ದೆ ಮಾಡಿದೆವು, ವ್ಯಾನಿಟಿ ಬ್ಯಾಗಿನೊಳಗೆ ಚಿಕ್ಕ ಪೊಟ್ಟಣದಲ್ಲಿ ನನ್ನ ಎಲ್ಲಾ ಚಿನ್ನಾಭರಣ‌ ಇಟ್ಟಿದ್ದೆ, ಹಣವನ್ನ ಅಲ್ಲೇ ಬಿಟ್ಟು ಒಡವೆಗಳನ್ನು ನಮಗೆ ಅರಿವಿಗೆ ಬಾರದ ರೀತಿಯಲ್ಲಿ ಯಾರೋ ಕದ್ದಿದ್ದಾರೆ. ದೊಡ್ಡಬಳ್ಳಾಪುರ ಬಸ್ ನಿಲ್ದಾಣದಲ್ಲಿ ಬಂದು ಇಳಿದು ಹೂ ತೆಗೆದುಕೊಳ್ಳಲು ವ್ಯಾನಿಟಿ ಬ್ಯಾಗ್ ತೆಗೆದು ನೋಡಿದಾಗ ಒಡವೆಗಳು ಕಳವು ಆಗಿರುವುದು ಗೊತ್ತಾಯಿತು ಎಂದು ಒಡವೆಗಳನ್ನ ಕಳೆದುಕೊಂಡ ಪುಷ್ಪಾವತಿ ತಿಳಿಸಿದ್ದಾರೆ.

ನನಗೆ ನಾಲ್ಕು ಮಂದಿ ಹೆಣ್ಣು ಮಕ್ಕಳು, ನನ್ನ ಗಂಡ ಅಡುಗೆ ಕೆಲಸ ಮಾಡಿ ಕೂಡಿಟ್ಟ ಹಣದಲ್ಲಿ ಆಭರಣಗಳನ್ನು ಮಾಡಿಸಿದ್ದೇವು. ಈ ಆಭರಣಗಳು‌ ನಮ್ಮ ಜೀವನಕ್ಕೆ ಆಧಾರವಾಗಿದ್ದವು. ಈಗ ಅವೂ ಇಲ್ಲದಾಗಿದೆ. ಚಿನ್ನಾಭರಣಗಳ ಕಳವು ಕುರಿತು ನಗರ ಠಾಣೆಯಲ್ಲಿ ದೂರು‌ ನೀಡಿದ್ದೇವೆ. ದಯವಿಟ್ಟು ನಮಗೆ ನಮ್ಮ ಒಡವೆಗಳನ್ನು ಪತ್ತೆ ಮಾಡಿಕೊಡಬೇಕೆಂದು ವಿನಂತಿಸಿಕೊಂಡರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 hour ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

7 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago