KSRTC ಬಸ್ ನಲ್ಲಿ ಮಹಿಳೆಯ ಚಿನ್ನಾಭರಣ ಕಳವು: ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿದ ಐನಾತಿ ಕಳ್ಳರು

ನ.6ರಂದು ಉಡುಪಿಯಲ್ಲಿ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಬಂದು ಕಾವೇರಿಭವನ‌ ಬಸ್ ನಿಲ್ದಾಣದಲ್ಲಿ ದೊಡ್ಡಬಳ್ಳಾಪುರ ಬಸ್ ಹತ್ತಿ ಬರುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿರುವ ಘಟನೆ ನಡೆದಿದೆ.

ತಾಲೂಕಿನ ನೆಲ್ಲುಕುಂಟೆ ಗ್ರಾಮದ ನಿವಾಸಿ ಪುಷ್ಪಾವತಿ ಚಿನ್ನದ ಒಡವೆಗಳನ್ನ‌ ಕಳೆದುಕೊಂಡ ಗೃಹಿಣಿ. ಉಡುಪಿಯಲ್ಲಿ ಸಂಬಂಧಿಕರ ಮದುವೆಗೆ ಚಿನ್ನದ ಒಡವೆಗಳನ್ನ ಹಾಕಿಕೊಂಡು ಹೋಗಿದ್ದರು. ಮದುವೆ ನಂತರ ಧರಿಸಿದ್ದ ಸುಮಾರು 33 ಗ್ರಾಂ ಚಿನ್ನದ ಲಾಂಗ್ ಚೈನ್, 31 ಗ್ರಾಂ ನೆಕ್ಲೆಸ್, 10 ಗ್ರಾಂ ವಾಲೆ ಜುಮುಕಿ, 8 ಗ್ರಾಂ ಮಾಟಿ, 3ಗ್ರಾಂನ‌ ಎರಡು ಚಿನ್ನದ ಉಂಗುರಗಳನ್ನು ತೆಗದು ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದರು. ಸಾರಿಗೆ ಬಸ್ ನಲ್ಲಿ ದೊಡ್ಡಬಳ್ಳಾಪುರಕ್ಕೆ ಬರುವ ಮಾರ್ಗಮಧ್ಯೆದಲ್ಲಿ ವ್ಯಾನಿಟಿ‌ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಆಭರಣಗಳನ್ನ ಕಳ್ಳರು ಕದ್ದೋಯ್ದಿದ್ದಾರೆ.

ನಾನು, ನನ್ನ ಮಗಳು, ನಮ್ಮ ಚಿಕ್ಕಮ್ಮ ಕಾಮಾಕ್ಷಿಪಾಳ್ಯದಲ್ಲಿರುವ ಸಂಬಂಧಿಕರ ಮನೆಯಿಂದ ಕಾವೇರಿ ಭವನ ಬಸ್ ನಿಲ್ದಾಣಕ್ಕೆ ಆಟೋದಲ್ಲಿ ಬಂದು ದೊಡ್ಡಬಳ್ಳಾಪುರಕ್ಕೆ ಬರುವ ಕೆಎಸ್ ಆರ್ ಟಿಸಿ ಬಸ್ ಹತ್ತಿ ಕುಳಿತೆವು, ಬಸ್ಸಿನಲ್ಲಿ ಹೆಚ್ಚು ಪ್ರಯಾಣಿಕರು ಇರಲಿಲ್ಲ, ನಮ್ಮ ಅಕ್ಕಪಕ್ಕ ಆಸನಗಳಲ್ಲಿ ಮಹಿಳೆಯರು ಕುಳಿತಿದ್ದರು, ಚಿನ್ನಾಭರಣ ಇದ್ದ ವ್ಯಾನಿಟಿ‌ ಬ್ಯಾಗ್ ನನ್ನ ಬಳಿಯೇ ಇತ್ತು, ನಾವು ಮೂರು ಜನ ಸ್ವಲ್ಪ ದೂರದವರೆಗೆ ನಿದ್ದೆ ಮಾಡಿದೆವು, ವ್ಯಾನಿಟಿ ಬ್ಯಾಗಿನೊಳಗೆ ಚಿಕ್ಕ ಪೊಟ್ಟಣದಲ್ಲಿ ನನ್ನ ಎಲ್ಲಾ ಚಿನ್ನಾಭರಣ‌ ಇಟ್ಟಿದ್ದೆ, ಹಣವನ್ನ ಅಲ್ಲೇ ಬಿಟ್ಟು ಒಡವೆಗಳನ್ನು ನಮಗೆ ಅರಿವಿಗೆ ಬಾರದ ರೀತಿಯಲ್ಲಿ ಯಾರೋ ಕದ್ದಿದ್ದಾರೆ. ದೊಡ್ಡಬಳ್ಳಾಪುರ ಬಸ್ ನಿಲ್ದಾಣದಲ್ಲಿ ಬಂದು ಇಳಿದು ಹೂ ತೆಗೆದುಕೊಳ್ಳಲು ವ್ಯಾನಿಟಿ ಬ್ಯಾಗ್ ತೆಗೆದು ನೋಡಿದಾಗ ಒಡವೆಗಳು ಕಳವು ಆಗಿರುವುದು ಗೊತ್ತಾಯಿತು ಎಂದು ಒಡವೆಗಳನ್ನ ಕಳೆದುಕೊಂಡ ಪುಷ್ಪಾವತಿ ತಿಳಿಸಿದ್ದಾರೆ.

ನನಗೆ ನಾಲ್ಕು ಮಂದಿ ಹೆಣ್ಣು ಮಕ್ಕಳು, ನನ್ನ ಗಂಡ ಅಡುಗೆ ಕೆಲಸ ಮಾಡಿ ಕೂಡಿಟ್ಟ ಹಣದಲ್ಲಿ ಆಭರಣಗಳನ್ನು ಮಾಡಿಸಿದ್ದೇವು. ಈ ಆಭರಣಗಳು‌ ನಮ್ಮ ಜೀವನಕ್ಕೆ ಆಧಾರವಾಗಿದ್ದವು. ಈಗ ಅವೂ ಇಲ್ಲದಾಗಿದೆ. ಚಿನ್ನಾಭರಣಗಳ ಕಳವು ಕುರಿತು ನಗರ ಠಾಣೆಯಲ್ಲಿ ದೂರು‌ ನೀಡಿದ್ದೇವೆ. ದಯವಿಟ್ಟು ನಮಗೆ ನಮ್ಮ ಒಡವೆಗಳನ್ನು ಪತ್ತೆ ಮಾಡಿಕೊಡಬೇಕೆಂದು ವಿನಂತಿಸಿಕೊಂಡರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago