KSRTC ಬಸ್ ನಲ್ಲಿ ಮಹಿಳೆಯ ಚಿನ್ನಾಭರಣ ಕಳವು: ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿದ ಐನಾತಿ ಕಳ್ಳರು

ನ.6ರಂದು ಉಡುಪಿಯಲ್ಲಿ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಬಂದು ಕಾವೇರಿಭವನ‌ ಬಸ್ ನಿಲ್ದಾಣದಲ್ಲಿ ದೊಡ್ಡಬಳ್ಳಾಪುರ ಬಸ್ ಹತ್ತಿ ಬರುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿರುವ ಘಟನೆ ನಡೆದಿದೆ.

ತಾಲೂಕಿನ ನೆಲ್ಲುಕುಂಟೆ ಗ್ರಾಮದ ನಿವಾಸಿ ಪುಷ್ಪಾವತಿ ಚಿನ್ನದ ಒಡವೆಗಳನ್ನ‌ ಕಳೆದುಕೊಂಡ ಗೃಹಿಣಿ. ಉಡುಪಿಯಲ್ಲಿ ಸಂಬಂಧಿಕರ ಮದುವೆಗೆ ಚಿನ್ನದ ಒಡವೆಗಳನ್ನ ಹಾಕಿಕೊಂಡು ಹೋಗಿದ್ದರು. ಮದುವೆ ನಂತರ ಧರಿಸಿದ್ದ ಸುಮಾರು 33 ಗ್ರಾಂ ಚಿನ್ನದ ಲಾಂಗ್ ಚೈನ್, 31 ಗ್ರಾಂ ನೆಕ್ಲೆಸ್, 10 ಗ್ರಾಂ ವಾಲೆ ಜುಮುಕಿ, 8 ಗ್ರಾಂ ಮಾಟಿ, 3ಗ್ರಾಂನ‌ ಎರಡು ಚಿನ್ನದ ಉಂಗುರಗಳನ್ನು ತೆಗದು ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದರು. ಸಾರಿಗೆ ಬಸ್ ನಲ್ಲಿ ದೊಡ್ಡಬಳ್ಳಾಪುರಕ್ಕೆ ಬರುವ ಮಾರ್ಗಮಧ್ಯೆದಲ್ಲಿ ವ್ಯಾನಿಟಿ‌ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಆಭರಣಗಳನ್ನ ಕಳ್ಳರು ಕದ್ದೋಯ್ದಿದ್ದಾರೆ.

ನಾನು, ನನ್ನ ಮಗಳು, ನಮ್ಮ ಚಿಕ್ಕಮ್ಮ ಕಾಮಾಕ್ಷಿಪಾಳ್ಯದಲ್ಲಿರುವ ಸಂಬಂಧಿಕರ ಮನೆಯಿಂದ ಕಾವೇರಿ ಭವನ ಬಸ್ ನಿಲ್ದಾಣಕ್ಕೆ ಆಟೋದಲ್ಲಿ ಬಂದು ದೊಡ್ಡಬಳ್ಳಾಪುರಕ್ಕೆ ಬರುವ ಕೆಎಸ್ ಆರ್ ಟಿಸಿ ಬಸ್ ಹತ್ತಿ ಕುಳಿತೆವು, ಬಸ್ಸಿನಲ್ಲಿ ಹೆಚ್ಚು ಪ್ರಯಾಣಿಕರು ಇರಲಿಲ್ಲ, ನಮ್ಮ ಅಕ್ಕಪಕ್ಕ ಆಸನಗಳಲ್ಲಿ ಮಹಿಳೆಯರು ಕುಳಿತಿದ್ದರು, ಚಿನ್ನಾಭರಣ ಇದ್ದ ವ್ಯಾನಿಟಿ‌ ಬ್ಯಾಗ್ ನನ್ನ ಬಳಿಯೇ ಇತ್ತು, ನಾವು ಮೂರು ಜನ ಸ್ವಲ್ಪ ದೂರದವರೆಗೆ ನಿದ್ದೆ ಮಾಡಿದೆವು, ವ್ಯಾನಿಟಿ ಬ್ಯಾಗಿನೊಳಗೆ ಚಿಕ್ಕ ಪೊಟ್ಟಣದಲ್ಲಿ ನನ್ನ ಎಲ್ಲಾ ಚಿನ್ನಾಭರಣ‌ ಇಟ್ಟಿದ್ದೆ, ಹಣವನ್ನ ಅಲ್ಲೇ ಬಿಟ್ಟು ಒಡವೆಗಳನ್ನು ನಮಗೆ ಅರಿವಿಗೆ ಬಾರದ ರೀತಿಯಲ್ಲಿ ಯಾರೋ ಕದ್ದಿದ್ದಾರೆ. ದೊಡ್ಡಬಳ್ಳಾಪುರ ಬಸ್ ನಿಲ್ದಾಣದಲ್ಲಿ ಬಂದು ಇಳಿದು ಹೂ ತೆಗೆದುಕೊಳ್ಳಲು ವ್ಯಾನಿಟಿ ಬ್ಯಾಗ್ ತೆಗೆದು ನೋಡಿದಾಗ ಒಡವೆಗಳು ಕಳವು ಆಗಿರುವುದು ಗೊತ್ತಾಯಿತು ಎಂದು ಒಡವೆಗಳನ್ನ ಕಳೆದುಕೊಂಡ ಪುಷ್ಪಾವತಿ ತಿಳಿಸಿದ್ದಾರೆ.

ನನಗೆ ನಾಲ್ಕು ಮಂದಿ ಹೆಣ್ಣು ಮಕ್ಕಳು, ನನ್ನ ಗಂಡ ಅಡುಗೆ ಕೆಲಸ ಮಾಡಿ ಕೂಡಿಟ್ಟ ಹಣದಲ್ಲಿ ಆಭರಣಗಳನ್ನು ಮಾಡಿಸಿದ್ದೇವು. ಈ ಆಭರಣಗಳು‌ ನಮ್ಮ ಜೀವನಕ್ಕೆ ಆಧಾರವಾಗಿದ್ದವು. ಈಗ ಅವೂ ಇಲ್ಲದಾಗಿದೆ. ಚಿನ್ನಾಭರಣಗಳ ಕಳವು ಕುರಿತು ನಗರ ಠಾಣೆಯಲ್ಲಿ ದೂರು‌ ನೀಡಿದ್ದೇವೆ. ದಯವಿಟ್ಟು ನಮಗೆ ನಮ್ಮ ಒಡವೆಗಳನ್ನು ಪತ್ತೆ ಮಾಡಿಕೊಡಬೇಕೆಂದು ವಿನಂತಿಸಿಕೊಂಡರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 hour ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago