KSRTC ಬಸ್ ನಲ್ಲಿ ಮಹಿಳೆಯ ಚಿನ್ನಾಭರಣ ಕಳವು: ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿದ ಐನಾತಿ ಕಳ್ಳರು

ನ.6ರಂದು ಉಡುಪಿಯಲ್ಲಿ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಬಂದು ಕಾವೇರಿಭವನ‌ ಬಸ್ ನಿಲ್ದಾಣದಲ್ಲಿ ದೊಡ್ಡಬಳ್ಳಾಪುರ ಬಸ್ ಹತ್ತಿ ಬರುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿರುವ ಘಟನೆ ನಡೆದಿದೆ.

ತಾಲೂಕಿನ ನೆಲ್ಲುಕುಂಟೆ ಗ್ರಾಮದ ನಿವಾಸಿ ಪುಷ್ಪಾವತಿ ಚಿನ್ನದ ಒಡವೆಗಳನ್ನ‌ ಕಳೆದುಕೊಂಡ ಗೃಹಿಣಿ. ಉಡುಪಿಯಲ್ಲಿ ಸಂಬಂಧಿಕರ ಮದುವೆಗೆ ಚಿನ್ನದ ಒಡವೆಗಳನ್ನ ಹಾಕಿಕೊಂಡು ಹೋಗಿದ್ದರು. ಮದುವೆ ನಂತರ ಧರಿಸಿದ್ದ ಸುಮಾರು 33 ಗ್ರಾಂ ಚಿನ್ನದ ಲಾಂಗ್ ಚೈನ್, 31 ಗ್ರಾಂ ನೆಕ್ಲೆಸ್, 10 ಗ್ರಾಂ ವಾಲೆ ಜುಮುಕಿ, 8 ಗ್ರಾಂ ಮಾಟಿ, 3ಗ್ರಾಂನ‌ ಎರಡು ಚಿನ್ನದ ಉಂಗುರಗಳನ್ನು ತೆಗದು ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದರು. ಸಾರಿಗೆ ಬಸ್ ನಲ್ಲಿ ದೊಡ್ಡಬಳ್ಳಾಪುರಕ್ಕೆ ಬರುವ ಮಾರ್ಗಮಧ್ಯೆದಲ್ಲಿ ವ್ಯಾನಿಟಿ‌ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಆಭರಣಗಳನ್ನ ಕಳ್ಳರು ಕದ್ದೋಯ್ದಿದ್ದಾರೆ.

ನಾನು, ನನ್ನ ಮಗಳು, ನಮ್ಮ ಚಿಕ್ಕಮ್ಮ ಕಾಮಾಕ್ಷಿಪಾಳ್ಯದಲ್ಲಿರುವ ಸಂಬಂಧಿಕರ ಮನೆಯಿಂದ ಕಾವೇರಿ ಭವನ ಬಸ್ ನಿಲ್ದಾಣಕ್ಕೆ ಆಟೋದಲ್ಲಿ ಬಂದು ದೊಡ್ಡಬಳ್ಳಾಪುರಕ್ಕೆ ಬರುವ ಕೆಎಸ್ ಆರ್ ಟಿಸಿ ಬಸ್ ಹತ್ತಿ ಕುಳಿತೆವು, ಬಸ್ಸಿನಲ್ಲಿ ಹೆಚ್ಚು ಪ್ರಯಾಣಿಕರು ಇರಲಿಲ್ಲ, ನಮ್ಮ ಅಕ್ಕಪಕ್ಕ ಆಸನಗಳಲ್ಲಿ ಮಹಿಳೆಯರು ಕುಳಿತಿದ್ದರು, ಚಿನ್ನಾಭರಣ ಇದ್ದ ವ್ಯಾನಿಟಿ‌ ಬ್ಯಾಗ್ ನನ್ನ ಬಳಿಯೇ ಇತ್ತು, ನಾವು ಮೂರು ಜನ ಸ್ವಲ್ಪ ದೂರದವರೆಗೆ ನಿದ್ದೆ ಮಾಡಿದೆವು, ವ್ಯಾನಿಟಿ ಬ್ಯಾಗಿನೊಳಗೆ ಚಿಕ್ಕ ಪೊಟ್ಟಣದಲ್ಲಿ ನನ್ನ ಎಲ್ಲಾ ಚಿನ್ನಾಭರಣ‌ ಇಟ್ಟಿದ್ದೆ, ಹಣವನ್ನ ಅಲ್ಲೇ ಬಿಟ್ಟು ಒಡವೆಗಳನ್ನು ನಮಗೆ ಅರಿವಿಗೆ ಬಾರದ ರೀತಿಯಲ್ಲಿ ಯಾರೋ ಕದ್ದಿದ್ದಾರೆ. ದೊಡ್ಡಬಳ್ಳಾಪುರ ಬಸ್ ನಿಲ್ದಾಣದಲ್ಲಿ ಬಂದು ಇಳಿದು ಹೂ ತೆಗೆದುಕೊಳ್ಳಲು ವ್ಯಾನಿಟಿ ಬ್ಯಾಗ್ ತೆಗೆದು ನೋಡಿದಾಗ ಒಡವೆಗಳು ಕಳವು ಆಗಿರುವುದು ಗೊತ್ತಾಯಿತು ಎಂದು ಒಡವೆಗಳನ್ನ ಕಳೆದುಕೊಂಡ ಪುಷ್ಪಾವತಿ ತಿಳಿಸಿದ್ದಾರೆ.

ನನಗೆ ನಾಲ್ಕು ಮಂದಿ ಹೆಣ್ಣು ಮಕ್ಕಳು, ನನ್ನ ಗಂಡ ಅಡುಗೆ ಕೆಲಸ ಮಾಡಿ ಕೂಡಿಟ್ಟ ಹಣದಲ್ಲಿ ಆಭರಣಗಳನ್ನು ಮಾಡಿಸಿದ್ದೇವು. ಈ ಆಭರಣಗಳು‌ ನಮ್ಮ ಜೀವನಕ್ಕೆ ಆಧಾರವಾಗಿದ್ದವು. ಈಗ ಅವೂ ಇಲ್ಲದಾಗಿದೆ. ಚಿನ್ನಾಭರಣಗಳ ಕಳವು ಕುರಿತು ನಗರ ಠಾಣೆಯಲ್ಲಿ ದೂರು‌ ನೀಡಿದ್ದೇವೆ. ದಯವಿಟ್ಟು ನಮಗೆ ನಮ್ಮ ಒಡವೆಗಳನ್ನು ಪತ್ತೆ ಮಾಡಿಕೊಡಬೇಕೆಂದು ವಿನಂತಿಸಿಕೊಂಡರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 hour ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

7 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

11 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

14 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago