KSRTC ಬಸ್ ನಲ್ಲಿ ಮಹಿಳೆಯ ಚಿನ್ನಾಭರಣ ಕಳವು: ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿದ ಐನಾತಿ ಕಳ್ಳರು

ನ.6ರಂದು ಉಡುಪಿಯಲ್ಲಿ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಬಂದು ಕಾವೇರಿಭವನ‌ ಬಸ್ ನಿಲ್ದಾಣದಲ್ಲಿ ದೊಡ್ಡಬಳ್ಳಾಪುರ ಬಸ್ ಹತ್ತಿ ಬರುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿರುವ ಘಟನೆ ನಡೆದಿದೆ.

ತಾಲೂಕಿನ ನೆಲ್ಲುಕುಂಟೆ ಗ್ರಾಮದ ನಿವಾಸಿ ಪುಷ್ಪಾವತಿ ಚಿನ್ನದ ಒಡವೆಗಳನ್ನ‌ ಕಳೆದುಕೊಂಡ ಗೃಹಿಣಿ. ಉಡುಪಿಯಲ್ಲಿ ಸಂಬಂಧಿಕರ ಮದುವೆಗೆ ಚಿನ್ನದ ಒಡವೆಗಳನ್ನ ಹಾಕಿಕೊಂಡು ಹೋಗಿದ್ದರು. ಮದುವೆ ನಂತರ ಧರಿಸಿದ್ದ ಸುಮಾರು 33 ಗ್ರಾಂ ಚಿನ್ನದ ಲಾಂಗ್ ಚೈನ್, 31 ಗ್ರಾಂ ನೆಕ್ಲೆಸ್, 10 ಗ್ರಾಂ ವಾಲೆ ಜುಮುಕಿ, 8 ಗ್ರಾಂ ಮಾಟಿ, 3ಗ್ರಾಂನ‌ ಎರಡು ಚಿನ್ನದ ಉಂಗುರಗಳನ್ನು ತೆಗದು ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದರು. ಸಾರಿಗೆ ಬಸ್ ನಲ್ಲಿ ದೊಡ್ಡಬಳ್ಳಾಪುರಕ್ಕೆ ಬರುವ ಮಾರ್ಗಮಧ್ಯೆದಲ್ಲಿ ವ್ಯಾನಿಟಿ‌ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಆಭರಣಗಳನ್ನ ಕಳ್ಳರು ಕದ್ದೋಯ್ದಿದ್ದಾರೆ.

ನಾನು, ನನ್ನ ಮಗಳು, ನಮ್ಮ ಚಿಕ್ಕಮ್ಮ ಕಾಮಾಕ್ಷಿಪಾಳ್ಯದಲ್ಲಿರುವ ಸಂಬಂಧಿಕರ ಮನೆಯಿಂದ ಕಾವೇರಿ ಭವನ ಬಸ್ ನಿಲ್ದಾಣಕ್ಕೆ ಆಟೋದಲ್ಲಿ ಬಂದು ದೊಡ್ಡಬಳ್ಳಾಪುರಕ್ಕೆ ಬರುವ ಕೆಎಸ್ ಆರ್ ಟಿಸಿ ಬಸ್ ಹತ್ತಿ ಕುಳಿತೆವು, ಬಸ್ಸಿನಲ್ಲಿ ಹೆಚ್ಚು ಪ್ರಯಾಣಿಕರು ಇರಲಿಲ್ಲ, ನಮ್ಮ ಅಕ್ಕಪಕ್ಕ ಆಸನಗಳಲ್ಲಿ ಮಹಿಳೆಯರು ಕುಳಿತಿದ್ದರು, ಚಿನ್ನಾಭರಣ ಇದ್ದ ವ್ಯಾನಿಟಿ‌ ಬ್ಯಾಗ್ ನನ್ನ ಬಳಿಯೇ ಇತ್ತು, ನಾವು ಮೂರು ಜನ ಸ್ವಲ್ಪ ದೂರದವರೆಗೆ ನಿದ್ದೆ ಮಾಡಿದೆವು, ವ್ಯಾನಿಟಿ ಬ್ಯಾಗಿನೊಳಗೆ ಚಿಕ್ಕ ಪೊಟ್ಟಣದಲ್ಲಿ ನನ್ನ ಎಲ್ಲಾ ಚಿನ್ನಾಭರಣ‌ ಇಟ್ಟಿದ್ದೆ, ಹಣವನ್ನ ಅಲ್ಲೇ ಬಿಟ್ಟು ಒಡವೆಗಳನ್ನು ನಮಗೆ ಅರಿವಿಗೆ ಬಾರದ ರೀತಿಯಲ್ಲಿ ಯಾರೋ ಕದ್ದಿದ್ದಾರೆ. ದೊಡ್ಡಬಳ್ಳಾಪುರ ಬಸ್ ನಿಲ್ದಾಣದಲ್ಲಿ ಬಂದು ಇಳಿದು ಹೂ ತೆಗೆದುಕೊಳ್ಳಲು ವ್ಯಾನಿಟಿ ಬ್ಯಾಗ್ ತೆಗೆದು ನೋಡಿದಾಗ ಒಡವೆಗಳು ಕಳವು ಆಗಿರುವುದು ಗೊತ್ತಾಯಿತು ಎಂದು ಒಡವೆಗಳನ್ನ ಕಳೆದುಕೊಂಡ ಪುಷ್ಪಾವತಿ ತಿಳಿಸಿದ್ದಾರೆ.

ನನಗೆ ನಾಲ್ಕು ಮಂದಿ ಹೆಣ್ಣು ಮಕ್ಕಳು, ನನ್ನ ಗಂಡ ಅಡುಗೆ ಕೆಲಸ ಮಾಡಿ ಕೂಡಿಟ್ಟ ಹಣದಲ್ಲಿ ಆಭರಣಗಳನ್ನು ಮಾಡಿಸಿದ್ದೇವು. ಈ ಆಭರಣಗಳು‌ ನಮ್ಮ ಜೀವನಕ್ಕೆ ಆಧಾರವಾಗಿದ್ದವು. ಈಗ ಅವೂ ಇಲ್ಲದಾಗಿದೆ. ಚಿನ್ನಾಭರಣಗಳ ಕಳವು ಕುರಿತು ನಗರ ಠಾಣೆಯಲ್ಲಿ ದೂರು‌ ನೀಡಿದ್ದೇವೆ. ದಯವಿಟ್ಟು ನಮಗೆ ನಮ್ಮ ಒಡವೆಗಳನ್ನು ಪತ್ತೆ ಮಾಡಿಕೊಡಬೇಕೆಂದು ವಿನಂತಿಸಿಕೊಂಡರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

6 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago