ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ. ಶೇ.70 ರಷ್ಟು ಗ್ರಾಮೀಣ ಭಾರತ ಕೃಷಿ ಮೇಲೆ ಅವಲಂಭಿತವಾಗಿದೆ. ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಭಿ, ಸ್ವಾಭಿಮಾನಿ ಆಗಲು ಕೃಷಿಕ ಸಮುದಾಯ, ರೈತ ಸಮುದಾಯ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೃಷಿ ಅಧಿಕಾರಿಗಳು ರೈತರ ಅಭಿಪ್ರಾಯ ಪಡೆದು, ರೈತರ ಅನುಭವ ಆಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸಹಕಾರ ನೀಡಬೇಕು. Lab to Land ಮತ್ತು Land to Lab ಕಡೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ಸಾಮಾಜಿಕ ನ್ಯಾಯ, ವರ್ಗ ರಹಿತ ಸಮಾಜ ಆಗಬೇಕಾದರೆ ರೈತರಿಗೆ ಆರ್ಥಿಕವಾಗಿ ಶಕ್ತಿ ನೀಡಬೇಕು. ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಸಾಮಾಜಿಕ ಬದಲಾವಣೆ ದಿಕ್ಕಿನಲ್ಲಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಇದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರೂ ಸುಳ್ಳು ಹೇಳಿದ್ದರು. ಸತ್ಯ ಏನು ಎಂದು ನಾಡಿನ ಜನತೆಗೆ ಮನವರಿಕೆಯಾಗಿದೆ ಎಂದು ತಿಳಿಸಿದರು.
ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಉದ್ದೇಶಕ್ಕಾಗಿ ವರ್ಷಕ್ಕೆ ನಮ್ಮ ಸರ್ಕಾರ 19,000 ಕೋಟಿ ಸಬ್ಸಿಡಿ ನೀಡುತ್ತಿದೆ. ಕೃಷಿ ನೀರಾವರಿ ಯೋಜನೆಗಳಿಗೆ ₹26,000 ಕೋಟಿ ನೀಡಿದ್ದೇವೆ. ಆರ್ಥಿಕತೆ ದಿವಾಳಿಯಾಗಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲು ಸಾಧ್ಯವಿತ್ತೇ? ಎಂದು ಪ್ರಶ್ನಿಸಿದರು.
ಇಂಥಾ ಹೊತ್ತಲ್ಲಿ ರೈತ ಸಾಧಕರನ್ನು ಗುರುತಿಸಿ ಕರೆದು ಸನ್ಮಾನಿಸುತ್ತಿರುವುದು ಅತ್ಯಂತ ಪ್ರೋತ್ಸಾಹದಾಯಕ. ಸಮಗ್ರ ಕೃಷಿಯನ್ನು ಮಾಡದ ಹೊರತು ಕೃಷಿ ಲಾಭದಾಯಕವಲ್ಲ ಎಂದರು.
ನಮ್ಮ ರಾಜ್ಯದಲ್ಲಿ ರಾಜಸ್ತಾನದ ನಂತರ ಅತಿ ಹೆಚ್ಚು ಒಣ ಕೃಷಿ ಭೂಮಿ ಹೆಚ್ಚು ಹೊಂದಿದೆ. ನಾವು ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆಯನ್ನು ನಮ್ಮ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿತ್ತು. ಈಗ ನಾವೇ ಅಧಿಕಾರಕ್ಕೆ ಬಂದು ಮತ್ತೆ ಜಾರಿ ಮಾಡಿದ್ದೇವೆ. ಇಲ್ಲಿಯವರೆಗೂ 24,000 ಕೃಷಿ ಹೊಂಡ ನಿರ್ಮಿಸಿ ದಾಖಲೆ ಮಾಡಲಾಗಿದೆ ಎಂದರು.
ನಾನೂ ರೈತ ಕುಟುಂಬದಿಂದ ಬಂದವನು, ಕೃಷಿ ಬದುಕು-ರೈತರ ಬದುಕು, ಗ್ರಾಮೀಣ ಬದುಕಿನ ಕಷ್ಟ ನಷ್ಟಗಳು ನನಗೆ ಗೊತ್ತಿದೆ. ಹೀಗಾಗಿ ರೈತರ ಪರವಾಗಿ ಸರ್ಕಾರದ ಮುಂದೆ ಬಂದ ಎಲ್ಲಾ ಪ್ರಸ್ತಾವನೆಗಳಿಗೂ ಮಂಜೂರಾತಿ ನೀಡುತ್ತಿದ್ದೇವೆ. ರೈತರಿಗೆ ಹೆಚ್ಚು ಒತ್ತು ಕೊಡುವ ಕೆಲಸಗಳನ್ನು ಮಾಡುತ್ತಿದ್ದೇವೆ. ಅದರಲ್ಲೂ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದು ಹೇಳಿದರು.
43% ಸಾವಯವ ಇಂಗಾಲ ಕಡಿಮೆ ಆಗುತ್ತಿರುವುದರಿಂದ ಭೂಮಿಯ ಫಲವತ್ತತೆ ಕಡಿಮೆ ಆಗಿ ರೈತರ ಉತ್ಪಾದನೆ, ಆದಾಯ ಕಡಿಮೆ ಆಗುತ್ತದೆ. ಇಂಥಾ ಹೊತ್ತಲ್ಲಿ “ಸೂಪರ್ ಸ್ಟಾರ್ ರೈತ” ಪುರಸ್ಕಾರಕ್ಕೆ ಒಳಗಾಗಿರುವವರು ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಂಡಿರುವುದು, ಇವರನ್ನು ವಿಜಯ ಕರ್ನಾಟಕ ಗುರುತಿಸಿರುವುದು ಒಳ್ಳೆಯದು. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಜಾರಿಗೆ ತಂದ “ನರೇಗಾ” ಕೃಷಿಗೆ ಬಹಳ ದೊಡ್ಡ ಅನುಕೂಲ ಕಲ್ಪಿಸಿದೆ ಎಂದರು.
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…