Lab to Land ಮತ್ತು Land to Lab ಕಡೆಗೆ ಕೃಷಿ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು- ಸಿಎಂ ಸಿದ್ದರಾಮಯ್ಯ

ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ. ಶೇ.70 ರಷ್ಟು ಗ್ರಾಮೀಣ ಭಾರತ ಕೃಷಿ ಮೇಲೆ ಅವಲಂಭಿತವಾಗಿದೆ. ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಭಿ, ಸ್ವಾಭಿಮಾನಿ ಆಗಲು ಕೃಷಿಕ ಸಮುದಾಯ, ರೈತ ಸಮುದಾಯ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೃಷಿ ಅಧಿಕಾರಿಗಳು ರೈತರ ಅಭಿಪ್ರಾಯ ಪಡೆದು, ರೈತರ ಅನುಭವ ಆಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸಹಕಾರ ನೀಡಬೇಕು. Lab to Land ಮತ್ತು Land to Lab ಕಡೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಸಾಮಾಜಿಕ ನ್ಯಾಯ, ವರ್ಗ ರಹಿತ ಸಮಾಜ ಆಗಬೇಕಾದರೆ ರೈತರಿಗೆ ಆರ್ಥಿಕವಾಗಿ ಶಕ್ತಿ ನೀಡಬೇಕು. ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಸಾಮಾಜಿಕ ಬದಲಾವಣೆ ದಿಕ್ಕಿನಲ್ಲಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಇದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರೂ ಸುಳ್ಳು ಹೇಳಿದ್ದರು. ಸತ್ಯ ಏನು ಎಂದು ನಾಡಿನ‌ ಜನತೆಗೆ ಮನವರಿಕೆಯಾಗಿದೆ ಎಂದು ತಿಳಿಸಿದರು.

ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಉದ್ದೇಶಕ್ಕಾಗಿ ವರ್ಷಕ್ಕೆ ನಮ್ಮ ಸರ್ಕಾರ 19,000 ಕೋಟಿ ಸಬ್ಸಿಡಿ ನೀಡುತ್ತಿದೆ. ಕೃಷಿ ನೀರಾವರಿ ಯೋಜನೆಗಳಿಗೆ ₹26,000 ಕೋಟಿ ನೀಡಿದ್ದೇವೆ. ಆರ್ಥಿಕತೆ ದಿವಾಳಿಯಾಗಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲು ಸಾಧ್ಯವಿತ್ತೇ? ಎಂದು ಪ್ರಶ್ನಿಸಿದರು.

ಇಂಥಾ ಹೊತ್ತಲ್ಲಿ ರೈತ ಸಾಧಕರನ್ನು ಗುರುತಿಸಿ ಕರೆದು ಸನ್ಮಾನಿಸುತ್ತಿರುವುದು ಅತ್ಯಂತ ಪ್ರೋತ್ಸಾಹದಾಯಕ. ಸಮಗ್ರ ಕೃಷಿಯನ್ನು ಮಾಡದ ಹೊರತು ಕೃಷಿ ಲಾಭದಾಯಕವಲ್ಲ ಎಂದರು.

ನಮ್ಮ ರಾಜ್ಯದಲ್ಲಿ ರಾಜಸ್ತಾನದ ನಂತರ ಅತಿ ಹೆಚ್ಚು ಒಣ ಕೃಷಿ ಭೂಮಿ ಹೆಚ್ಚು ಹೊಂದಿದೆ. ನಾವು ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆಯನ್ನು ನಮ್ಮ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿತ್ತು. ಈಗ ನಾವೇ ಅಧಿಕಾರಕ್ಕೆ ಬಂದು ಮತ್ತೆ ಜಾರಿ ಮಾಡಿದ್ದೇವೆ. ಇಲ್ಲಿಯವರೆಗೂ 24,000 ಕೃಷಿ ಹೊಂಡ ನಿರ್ಮಿಸಿ ದಾಖಲೆ ಮಾಡಲಾಗಿದೆ ಎಂದರು.

ನಾನೂ ರೈತ ಕುಟುಂಬದಿಂದ ಬಂದವನು, ಕೃಷಿ ಬದುಕು-ರೈತರ ಬದುಕು, ಗ್ರಾಮೀಣ ಬದುಕಿನ‌ ಕಷ್ಟ ನಷ್ಟಗಳು ನನಗೆ ಗೊತ್ತಿದೆ. ಹೀಗಾಗಿ ರೈತರ ಪರವಾಗಿ ಸರ್ಕಾರದ ಮುಂದೆ ಬಂದ ಎಲ್ಲಾ ಪ್ರಸ್ತಾವನೆಗಳಿಗೂ ಮಂಜೂರಾತಿ  ನೀಡುತ್ತಿದ್ದೇವೆ. ರೈತರಿಗೆ ಹೆಚ್ಚು ಒತ್ತು ಕೊಡುವ ಕೆಲಸಗಳನ್ನು ಮಾಡುತ್ತಿದ್ದೇವೆ. ಅದರಲ್ಲೂ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದು ಹೇಳಿದರು.

43% ಸಾವಯವ ಇಂಗಾಲ ಕಡಿಮೆ ಆಗುತ್ತಿರುವುದರಿಂದ ಭೂಮಿಯ ಫಲವತ್ತತೆ ಕಡಿಮೆ ಆಗಿ ರೈತರ ಉತ್ಪಾದನೆ, ಆದಾಯ ಕಡಿಮೆ ಆಗುತ್ತದೆ. ಇಂಥಾ ಹೊತ್ತಲ್ಲಿ “ಸೂಪರ್ ಸ್ಟಾರ್ ರೈತ” ಪುರಸ್ಕಾರಕ್ಕೆ ಒಳಗಾಗಿರುವವರು ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಂಡಿರುವುದು, ಇವರನ್ನು ವಿಜಯ ಕರ್ನಾಟಕ ಗುರುತಿಸಿರುವುದು ಒಳ್ಳೆಯದು. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಜಾರಿಗೆ ತಂದ “ನರೇಗಾ” ಕೃಷಿಗೆ ಬಹಳ ದೊಡ್ಡ ಅನುಕೂಲ ಕಲ್ಪಿಸಿದೆ ಎಂದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 minutes ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

6 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

20 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

21 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

22 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

22 hours ago