LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳಿಂದ “ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ “ವೆಬ್ ಸೈಟ್” https://erp.dom.karnataka.gov.in/lkg ಮೂಲಕ ಆನ್ ಲೈನ್ ನಲ್ಲಿ ಪೋಷಕರು ಅರ್ಜಿಗಳನ್ನು ಸಲ್ಲಿಸಬುದಾಗಿದೆ. ಮೇ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ. ವಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ವಿದ್ಯಾರ್ಥಿಗಳಿಗೆ ಶೇ.75% ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25% ರಷ್ಟು ಸೀಟುಗಳು ಖಾಲಿ ಇದ್ದು, ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್ ಸೈಟ್ :https://dom.karnataka.gov.in, ಜಿಲ್ಲಾ ಅಧಿಕಾರಿಗಳ ಕಚೇರಿ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455, ಮುಖ್ಯೋಪಾಧ್ಯಾಯರು, ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆ, ವಿಜಯಪುರ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಸಂಖ್ಯೆ- 9066296080, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳು, ವಿಜಯಪುರ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು. ದೂರವಾಣಿ ಸಂಖ್ಯೆ-080-27682882, 27627444, 27931899, 27725445, 8317403213, ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ : 8277799990 ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Ramesh Babu

Journalist

Recent Posts

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

5 hours ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

10 hours ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

11 hours ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

13 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

15 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

1 day ago