LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳಿಂದ “ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ “ವೆಬ್ ಸೈಟ್” https://erp.dom.karnataka.gov.in/lkg ಮೂಲಕ ಆನ್ ಲೈನ್ ನಲ್ಲಿ ಪೋಷಕರು ಅರ್ಜಿಗಳನ್ನು ಸಲ್ಲಿಸಬುದಾಗಿದೆ. ಮೇ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ. ವಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ವಿದ್ಯಾರ್ಥಿಗಳಿಗೆ ಶೇ.75% ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25% ರಷ್ಟು ಸೀಟುಗಳು ಖಾಲಿ ಇದ್ದು, ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್ ಸೈಟ್ :https://dom.karnataka.gov.in, ಜಿಲ್ಲಾ ಅಧಿಕಾರಿಗಳ ಕಚೇರಿ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455, ಮುಖ್ಯೋಪಾಧ್ಯಾಯರು, ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆ, ವಿಜಯಪುರ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಸಂಖ್ಯೆ- 9066296080, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳು, ವಿಜಯಪುರ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು. ದೂರವಾಣಿ ಸಂಖ್ಯೆ-080-27682882, 27627444, 27931899, 27725445, 8317403213, ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ : 8277799990 ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

12 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

13 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

19 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago