MOB ಗಳ ಪರೇಡ್ ನಡೆಸಿದ ಡಿವೈಎಸ್ಪಿ ಪಾಂಡುರಂಗ: ಕಳ್ಳರ ಮೇಲೆ ಖಾಕಿ ಹದ್ದಿನಕಣ್ಣು- ಹಳೇ ಚಾಳಿ ಮುಂದುವರಿಸಿದರೆ ಕಾನೂನು ಕ್ರಮ- ಡಿವೈಎಸ್ಪಿ ಪಾಂಡುರಂಗ ವಾರ್ನಿಂಗ್

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಆವರಣದಲ್ಲಿ ಡಿವೈಎಸ್ಪಿ ಪಾಂಡುರಂಗ ನೇತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗದ ಎಲ್ಲಾ ಠಾಣೆಗಳ ಎಂಒಬಿಗಳ ಪರೇಡ್ ನಡೆಯಿತು.

ಸಾವಿರಕ್ಕೂ ಹೆಚ್ಚು ಎಂಒಬಿಗಳ ಪೈಕಿ ಕೇವಲ 117 ಎಂಒಬಿಗಳು ಮಾತ್ರ ಇಂದಿನ ನಡೆದ ಪರೇಡ್ ನಲ್ಲಿ ಇದ್ದರು….

ಈ ವೇಳೆ‌ ಡಿವೈಎಸ್ಪಿ ಪಾಂಡುರಂಗ ಮಾತನಾಡಿ, ರಾತ್ರಿ ಕಳ್ಳತನ ಮಾಡಿ ಬೆಳಿಗ್ಗೆ ಡ್ಯೂಟಿ ಅಂತ ಹೇಳಿದ್ರೆ ಪೋಲಿಸರು ಸುಮ್ಮನಿರಲ್ಲ. ಹಳೇ ಕಳ್ಳರ ಮೇಲೂ ಪೊಲೀಸರ ನಿಗಾ ಇದ್ದೆ ಇರುತ್ತದೆ ಎಂದರು.

ಯಾವುದೇ ರೀತಿಯ ‌ಕಾನೂನು‌ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬೇಡಿ. ಸಮಾಜದಲ್ಲಿ ಉತ್ತಮ‌ ಕೆಲಸವನ್ನು ‌ಮಾಡಿ. ಸಮಾಜದಲ್ಲಿ ಗೌರವಯುತವಾಗಿ ಬಾಳಲು ಪ್ರಯತ್ನಿಸಬೇಕು. ಅದಕ್ಕೆ ನಾವು ಕೂಡ ಸಹಾಯ ಮಾಡುತ್ತೇವೆ ಎಂದರು.

ಕಳ್ಳರ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆಗೆ ತಿಳಿಸುವಂತೆ ಹಳೇ ಕಳ್ಳರಿಗೆ ಸಲಹೆ ನೀಡಿದರು. ಸಮಾಜದ ಶಾಂತಿಗೆ ಧಕ್ಕೆ‌ಯಾಗದಂತೆ ಇರಬೇಕು. ಯಾವುದೇ ಅಕ್ರಮ ಕೆಲಸದಲ್ಲಿ ‌ಭಾಗಿಯಾದರೆ ಅವರ ಮೇಲೆ ಕ್ರಮವಹಿಸಲಾಗುತ್ತದೆ‌ ಎಂದರು.

ಈ ವೇಳೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಶಶಿಧರ್, ಪ್ರಶಾಂತ್, ಕಲ್ಲಪ್ಪ, ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

2 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

3 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

5 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

6 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

6 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

7 hours ago