MOB ಗಳ ಪರೇಡ್ ನಡೆಸಿದ ಡಿವೈಎಸ್ಪಿ ಪಾಂಡುರಂಗ: ಕಳ್ಳರ ಮೇಲೆ ಖಾಕಿ ಹದ್ದಿನಕಣ್ಣು- ಹಳೇ ಚಾಳಿ ಮುಂದುವರಿಸಿದರೆ ಕಾನೂನು ಕ್ರಮ- ಡಿವೈಎಸ್ಪಿ ಪಾಂಡುರಂಗ ವಾರ್ನಿಂಗ್

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಆವರಣದಲ್ಲಿ ಡಿವೈಎಸ್ಪಿ ಪಾಂಡುರಂಗ ನೇತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗದ ಎಲ್ಲಾ ಠಾಣೆಗಳ ಎಂಒಬಿಗಳ ಪರೇಡ್ ನಡೆಯಿತು.

ಸಾವಿರಕ್ಕೂ ಹೆಚ್ಚು ಎಂಒಬಿಗಳ ಪೈಕಿ ಕೇವಲ 117 ಎಂಒಬಿಗಳು ಮಾತ್ರ ಇಂದಿನ ನಡೆದ ಪರೇಡ್ ನಲ್ಲಿ ಇದ್ದರು….

ಈ ವೇಳೆ‌ ಡಿವೈಎಸ್ಪಿ ಪಾಂಡುರಂಗ ಮಾತನಾಡಿ, ರಾತ್ರಿ ಕಳ್ಳತನ ಮಾಡಿ ಬೆಳಿಗ್ಗೆ ಡ್ಯೂಟಿ ಅಂತ ಹೇಳಿದ್ರೆ ಪೋಲಿಸರು ಸುಮ್ಮನಿರಲ್ಲ. ಹಳೇ ಕಳ್ಳರ ಮೇಲೂ ಪೊಲೀಸರ ನಿಗಾ ಇದ್ದೆ ಇರುತ್ತದೆ ಎಂದರು.

ಯಾವುದೇ ರೀತಿಯ ‌ಕಾನೂನು‌ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬೇಡಿ. ಸಮಾಜದಲ್ಲಿ ಉತ್ತಮ‌ ಕೆಲಸವನ್ನು ‌ಮಾಡಿ. ಸಮಾಜದಲ್ಲಿ ಗೌರವಯುತವಾಗಿ ಬಾಳಲು ಪ್ರಯತ್ನಿಸಬೇಕು. ಅದಕ್ಕೆ ನಾವು ಕೂಡ ಸಹಾಯ ಮಾಡುತ್ತೇವೆ ಎಂದರು.

ಕಳ್ಳರ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆಗೆ ತಿಳಿಸುವಂತೆ ಹಳೇ ಕಳ್ಳರಿಗೆ ಸಲಹೆ ನೀಡಿದರು. ಸಮಾಜದ ಶಾಂತಿಗೆ ಧಕ್ಕೆ‌ಯಾಗದಂತೆ ಇರಬೇಕು. ಯಾವುದೇ ಅಕ್ರಮ ಕೆಲಸದಲ್ಲಿ ‌ಭಾಗಿಯಾದರೆ ಅವರ ಮೇಲೆ ಕ್ರಮವಹಿಸಲಾಗುತ್ತದೆ‌ ಎಂದರು.

ಈ ವೇಳೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಶಶಿಧರ್, ಪ್ರಶಾಂತ್, ಕಲ್ಲಪ್ಪ, ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

7 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

9 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

14 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago