MOB ಗಳ ಪರೇಡ್ ನಡೆಸಿದ ಡಿವೈಎಸ್ಪಿ ಪಾಂಡುರಂಗ: ಕಳ್ಳರ ಮೇಲೆ ಖಾಕಿ ಹದ್ದಿನಕಣ್ಣು- ಹಳೇ ಚಾಳಿ ಮುಂದುವರಿಸಿದರೆ ಕಾನೂನು ಕ್ರಮ- ಡಿವೈಎಸ್ಪಿ ಪಾಂಡುರಂಗ ವಾರ್ನಿಂಗ್

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಆವರಣದಲ್ಲಿ ಡಿವೈಎಸ್ಪಿ ಪಾಂಡುರಂಗ ನೇತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗದ ಎಲ್ಲಾ ಠಾಣೆಗಳ ಎಂಒಬಿಗಳ ಪರೇಡ್ ನಡೆಯಿತು.

ಸಾವಿರಕ್ಕೂ ಹೆಚ್ಚು ಎಂಒಬಿಗಳ ಪೈಕಿ ಕೇವಲ 117 ಎಂಒಬಿಗಳು ಮಾತ್ರ ಇಂದಿನ ನಡೆದ ಪರೇಡ್ ನಲ್ಲಿ ಇದ್ದರು….

ಈ ವೇಳೆ‌ ಡಿವೈಎಸ್ಪಿ ಪಾಂಡುರಂಗ ಮಾತನಾಡಿ, ರಾತ್ರಿ ಕಳ್ಳತನ ಮಾಡಿ ಬೆಳಿಗ್ಗೆ ಡ್ಯೂಟಿ ಅಂತ ಹೇಳಿದ್ರೆ ಪೋಲಿಸರು ಸುಮ್ಮನಿರಲ್ಲ. ಹಳೇ ಕಳ್ಳರ ಮೇಲೂ ಪೊಲೀಸರ ನಿಗಾ ಇದ್ದೆ ಇರುತ್ತದೆ ಎಂದರು.

ಯಾವುದೇ ರೀತಿಯ ‌ಕಾನೂನು‌ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬೇಡಿ. ಸಮಾಜದಲ್ಲಿ ಉತ್ತಮ‌ ಕೆಲಸವನ್ನು ‌ಮಾಡಿ. ಸಮಾಜದಲ್ಲಿ ಗೌರವಯುತವಾಗಿ ಬಾಳಲು ಪ್ರಯತ್ನಿಸಬೇಕು. ಅದಕ್ಕೆ ನಾವು ಕೂಡ ಸಹಾಯ ಮಾಡುತ್ತೇವೆ ಎಂದರು.

ಕಳ್ಳರ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆಗೆ ತಿಳಿಸುವಂತೆ ಹಳೇ ಕಳ್ಳರಿಗೆ ಸಲಹೆ ನೀಡಿದರು. ಸಮಾಜದ ಶಾಂತಿಗೆ ಧಕ್ಕೆ‌ಯಾಗದಂತೆ ಇರಬೇಕು. ಯಾವುದೇ ಅಕ್ರಮ ಕೆಲಸದಲ್ಲಿ ‌ಭಾಗಿಯಾದರೆ ಅವರ ಮೇಲೆ ಕ್ರಮವಹಿಸಲಾಗುತ್ತದೆ‌ ಎಂದರು.

ಈ ವೇಳೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಶಶಿಧರ್, ಪ್ರಶಾಂತ್, ಕಲ್ಲಪ್ಪ, ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

8 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago