Categories: ಸಿನಿಮಾ

‘Most Prolific Film Star in Indian Cinema’: ಮೆಗಾಸ್ಟಾರ್ ಚಿರಂಜೀವಿ ಡಾನ್ಸ್ ಗೆ ಒಲಿದ ಗಿನ್ನೀಸ್ ವಿಶ್ವ ದಾಖಲೆ ಗೌರವ

ತನ್ನ ಚಲನ ಚಿತ್ರಗಳಲ್ಲಿ ವಿವಿಧ ಹಾಡುಗಳಿಗೆ ವಿಭಿನ್ನವಾದ ಸ್ಟೆಪ್ಸ್ ಹಾಕುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ತೆಲುಗಿನ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಭಾರತೀಯ ಚಲನಚಿತ್ರೋದ್ಯಮದ ಅತ್ಯಂತ ಕ್ರಿಯಾತ್ಮಾಕ ತಾರೆ ಎಂದು ಗಿನ್ನಿಸ್ ವಿಶ್ವ ದಾಖಲೆ ಗೌರವ ದೊರಕಿದೆ.

ಹೈದರಾಬಾದ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗಿನ್ನಿಸ್ ವಿಶ್ವ ದಾಖಲೆಯ ಪ್ರತಿನಿಧಿಗಳು ಚಿರಂಜೀವಿಗೆ ಅವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.

ಚಿರಂಜೀವಿ ಅವರು 1978ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರ 46 ವರ್ಷಗಳ ಸಿನಿ ಪಯಣದಲ್ಲಿ 156 ಚಿತ್ರಗಳಲ್ಲಿ ಅಭಿನಯಿಸಿದ್ದು, 537 ಹಾಡುಗಳಲ್ಲಿ 24,000 ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಚಿರಂಜೀವಿ, ಈ ಕ್ಷಣ ಅವಿಸ್ಮರಣೀಯವಾಗಿದೆ. ನಾನು ಮಾಡಿದ ನೃತ್ಯಗಳಿಂದಾಗಿ ಗಿನ್ನಿಸ್ ವಿಶ್ವ ದಾಖಲೆಗೆ ಸೇರುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ. ಇದು ನಿಜವಾಗಿಯೂ ನನ್ನನ್ನು ನಟನಾಗಿ ಮಾಡಿದೆ. ನೃತ್ಯವು ನನ್ನ ವೃತ್ತಿ ಜೀವನದುದ್ದಕ್ಕೂ ಉತ್ತಮ ಪ್ರಶಂಸೆ ತಂದುಕೊಟ್ಟಿದೆ. ನನ್ನನ್ನು ನಟನಾಗಿ ಮಾಡುವಲ್ಲಿ ನಿರ್ದೇಶಕರು, ನಿರ್ಮಾಪಕರು, ನೃತ್ಯ ಸಂಯೋಜಕರ ಕೊಡುಗೆ ಅಪಾರವಾಗಿದೆ. ಅವರಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದರು.

ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾದ ಚಿರಂಜೀವಿ ಅವರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಹಾಗೂ ಚಿರಂಜೀವಿ ಸಹೋದರ ಪವನ್ ಕಲ್ಯಾಣ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ‌,  ಸೇರಿದಂತೆ ಮತ್ತಿತರ ಸಿನಿ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

5 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

6 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

7 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

8 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

10 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

16 hours ago