Categories: ಸಿನಿಮಾ

‘Most Prolific Film Star in Indian Cinema’: ಮೆಗಾಸ್ಟಾರ್ ಚಿರಂಜೀವಿ ಡಾನ್ಸ್ ಗೆ ಒಲಿದ ಗಿನ್ನೀಸ್ ವಿಶ್ವ ದಾಖಲೆ ಗೌರವ

ತನ್ನ ಚಲನ ಚಿತ್ರಗಳಲ್ಲಿ ವಿವಿಧ ಹಾಡುಗಳಿಗೆ ವಿಭಿನ್ನವಾದ ಸ್ಟೆಪ್ಸ್ ಹಾಕುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ತೆಲುಗಿನ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಭಾರತೀಯ ಚಲನಚಿತ್ರೋದ್ಯಮದ ಅತ್ಯಂತ ಕ್ರಿಯಾತ್ಮಾಕ ತಾರೆ ಎಂದು ಗಿನ್ನಿಸ್ ವಿಶ್ವ ದಾಖಲೆ ಗೌರವ ದೊರಕಿದೆ.

ಹೈದರಾಬಾದ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗಿನ್ನಿಸ್ ವಿಶ್ವ ದಾಖಲೆಯ ಪ್ರತಿನಿಧಿಗಳು ಚಿರಂಜೀವಿಗೆ ಅವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.

ಚಿರಂಜೀವಿ ಅವರು 1978ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರ 46 ವರ್ಷಗಳ ಸಿನಿ ಪಯಣದಲ್ಲಿ 156 ಚಿತ್ರಗಳಲ್ಲಿ ಅಭಿನಯಿಸಿದ್ದು, 537 ಹಾಡುಗಳಲ್ಲಿ 24,000 ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಚಿರಂಜೀವಿ, ಈ ಕ್ಷಣ ಅವಿಸ್ಮರಣೀಯವಾಗಿದೆ. ನಾನು ಮಾಡಿದ ನೃತ್ಯಗಳಿಂದಾಗಿ ಗಿನ್ನಿಸ್ ವಿಶ್ವ ದಾಖಲೆಗೆ ಸೇರುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ. ಇದು ನಿಜವಾಗಿಯೂ ನನ್ನನ್ನು ನಟನಾಗಿ ಮಾಡಿದೆ. ನೃತ್ಯವು ನನ್ನ ವೃತ್ತಿ ಜೀವನದುದ್ದಕ್ಕೂ ಉತ್ತಮ ಪ್ರಶಂಸೆ ತಂದುಕೊಟ್ಟಿದೆ. ನನ್ನನ್ನು ನಟನಾಗಿ ಮಾಡುವಲ್ಲಿ ನಿರ್ದೇಶಕರು, ನಿರ್ಮಾಪಕರು, ನೃತ್ಯ ಸಂಯೋಜಕರ ಕೊಡುಗೆ ಅಪಾರವಾಗಿದೆ. ಅವರಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದರು.

ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾದ ಚಿರಂಜೀವಿ ಅವರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಹಾಗೂ ಚಿರಂಜೀವಿ ಸಹೋದರ ಪವನ್ ಕಲ್ಯಾಣ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ‌,  ಸೇರಿದಂತೆ ಮತ್ತಿತರ ಸಿನಿ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ಸಿಎಂ ಸಭೆ: ಸಭೆಯ ಪ್ರಮುಖಾಂಶಗಳು ಇಲ್ಲಿವೆ ಓದಿ…

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…

9 hours ago

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

18 hours ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

18 hours ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

20 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

1 day ago