Categories: ಸಿನಿಮಾ

‘Most Prolific Film Star in Indian Cinema’: ಮೆಗಾಸ್ಟಾರ್ ಚಿರಂಜೀವಿ ಡಾನ್ಸ್ ಗೆ ಒಲಿದ ಗಿನ್ನೀಸ್ ವಿಶ್ವ ದಾಖಲೆ ಗೌರವ

ತನ್ನ ಚಲನ ಚಿತ್ರಗಳಲ್ಲಿ ವಿವಿಧ ಹಾಡುಗಳಿಗೆ ವಿಭಿನ್ನವಾದ ಸ್ಟೆಪ್ಸ್ ಹಾಕುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ತೆಲುಗಿನ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಭಾರತೀಯ ಚಲನಚಿತ್ರೋದ್ಯಮದ ಅತ್ಯಂತ ಕ್ರಿಯಾತ್ಮಾಕ ತಾರೆ ಎಂದು ಗಿನ್ನಿಸ್ ವಿಶ್ವ ದಾಖಲೆ ಗೌರವ ದೊರಕಿದೆ.

ಹೈದರಾಬಾದ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗಿನ್ನಿಸ್ ವಿಶ್ವ ದಾಖಲೆಯ ಪ್ರತಿನಿಧಿಗಳು ಚಿರಂಜೀವಿಗೆ ಅವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.

ಚಿರಂಜೀವಿ ಅವರು 1978ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರ 46 ವರ್ಷಗಳ ಸಿನಿ ಪಯಣದಲ್ಲಿ 156 ಚಿತ್ರಗಳಲ್ಲಿ ಅಭಿನಯಿಸಿದ್ದು, 537 ಹಾಡುಗಳಲ್ಲಿ 24,000 ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಚಿರಂಜೀವಿ, ಈ ಕ್ಷಣ ಅವಿಸ್ಮರಣೀಯವಾಗಿದೆ. ನಾನು ಮಾಡಿದ ನೃತ್ಯಗಳಿಂದಾಗಿ ಗಿನ್ನಿಸ್ ವಿಶ್ವ ದಾಖಲೆಗೆ ಸೇರುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ. ಇದು ನಿಜವಾಗಿಯೂ ನನ್ನನ್ನು ನಟನಾಗಿ ಮಾಡಿದೆ. ನೃತ್ಯವು ನನ್ನ ವೃತ್ತಿ ಜೀವನದುದ್ದಕ್ಕೂ ಉತ್ತಮ ಪ್ರಶಂಸೆ ತಂದುಕೊಟ್ಟಿದೆ. ನನ್ನನ್ನು ನಟನಾಗಿ ಮಾಡುವಲ್ಲಿ ನಿರ್ದೇಶಕರು, ನಿರ್ಮಾಪಕರು, ನೃತ್ಯ ಸಂಯೋಜಕರ ಕೊಡುಗೆ ಅಪಾರವಾಗಿದೆ. ಅವರಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದರು.

ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾದ ಚಿರಂಜೀವಿ ಅವರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಹಾಗೂ ಚಿರಂಜೀವಿ ಸಹೋದರ ಪವನ್ ಕಲ್ಯಾಣ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ‌,  ಸೇರಿದಂತೆ ಮತ್ತಿತರ ಸಿನಿ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

1 hour ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

14 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

14 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

17 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

18 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

22 hours ago