Categories: ಸಿನಿಮಾ

‘Most Prolific Film Star in Indian Cinema’: ಮೆಗಾಸ್ಟಾರ್ ಚಿರಂಜೀವಿ ಡಾನ್ಸ್ ಗೆ ಒಲಿದ ಗಿನ್ನೀಸ್ ವಿಶ್ವ ದಾಖಲೆ ಗೌರವ

ತನ್ನ ಚಲನ ಚಿತ್ರಗಳಲ್ಲಿ ವಿವಿಧ ಹಾಡುಗಳಿಗೆ ವಿಭಿನ್ನವಾದ ಸ್ಟೆಪ್ಸ್ ಹಾಕುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ತೆಲುಗಿನ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಭಾರತೀಯ ಚಲನಚಿತ್ರೋದ್ಯಮದ ಅತ್ಯಂತ ಕ್ರಿಯಾತ್ಮಾಕ ತಾರೆ ಎಂದು ಗಿನ್ನಿಸ್ ವಿಶ್ವ ದಾಖಲೆ ಗೌರವ ದೊರಕಿದೆ.

ಹೈದರಾಬಾದ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗಿನ್ನಿಸ್ ವಿಶ್ವ ದಾಖಲೆಯ ಪ್ರತಿನಿಧಿಗಳು ಚಿರಂಜೀವಿಗೆ ಅವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.

ಚಿರಂಜೀವಿ ಅವರು 1978ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರ 46 ವರ್ಷಗಳ ಸಿನಿ ಪಯಣದಲ್ಲಿ 156 ಚಿತ್ರಗಳಲ್ಲಿ ಅಭಿನಯಿಸಿದ್ದು, 537 ಹಾಡುಗಳಲ್ಲಿ 24,000 ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಚಿರಂಜೀವಿ, ಈ ಕ್ಷಣ ಅವಿಸ್ಮರಣೀಯವಾಗಿದೆ. ನಾನು ಮಾಡಿದ ನೃತ್ಯಗಳಿಂದಾಗಿ ಗಿನ್ನಿಸ್ ವಿಶ್ವ ದಾಖಲೆಗೆ ಸೇರುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ. ಇದು ನಿಜವಾಗಿಯೂ ನನ್ನನ್ನು ನಟನಾಗಿ ಮಾಡಿದೆ. ನೃತ್ಯವು ನನ್ನ ವೃತ್ತಿ ಜೀವನದುದ್ದಕ್ಕೂ ಉತ್ತಮ ಪ್ರಶಂಸೆ ತಂದುಕೊಟ್ಟಿದೆ. ನನ್ನನ್ನು ನಟನಾಗಿ ಮಾಡುವಲ್ಲಿ ನಿರ್ದೇಶಕರು, ನಿರ್ಮಾಪಕರು, ನೃತ್ಯ ಸಂಯೋಜಕರ ಕೊಡುಗೆ ಅಪಾರವಾಗಿದೆ. ಅವರಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದರು.

ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾದ ಚಿರಂಜೀವಿ ಅವರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಹಾಗೂ ಚಿರಂಜೀವಿ ಸಹೋದರ ಪವನ್ ಕಲ್ಯಾಣ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ‌,  ಸೇರಿದಂತೆ ಮತ್ತಿತರ ಸಿನಿ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

50 minutes ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

14 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

14 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

14 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

15 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

16 hours ago