ತನ್ನ ಚಲನ ಚಿತ್ರಗಳಲ್ಲಿ ವಿವಿಧ ಹಾಡುಗಳಿಗೆ ವಿಭಿನ್ನವಾದ ಸ್ಟೆಪ್ಸ್ ಹಾಕುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ತೆಲುಗಿನ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಭಾರತೀಯ ಚಲನಚಿತ್ರೋದ್ಯಮದ ಅತ್ಯಂತ ಕ್ರಿಯಾತ್ಮಾಕ ತಾರೆ ಎಂದು ಗಿನ್ನಿಸ್ ವಿಶ್ವ ದಾಖಲೆ ಗೌರವ ದೊರಕಿದೆ.
ಹೈದರಾಬಾದ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗಿನ್ನಿಸ್ ವಿಶ್ವ ದಾಖಲೆಯ ಪ್ರತಿನಿಧಿಗಳು ಚಿರಂಜೀವಿಗೆ ಅವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.
ಚಿರಂಜೀವಿ ಅವರು 1978ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರ 46 ವರ್ಷಗಳ ಸಿನಿ ಪಯಣದಲ್ಲಿ 156 ಚಿತ್ರಗಳಲ್ಲಿ ಅಭಿನಯಿಸಿದ್ದು, 537 ಹಾಡುಗಳಲ್ಲಿ 24,000 ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಚಿರಂಜೀವಿ, ಈ ಕ್ಷಣ ಅವಿಸ್ಮರಣೀಯವಾಗಿದೆ. ನಾನು ಮಾಡಿದ ನೃತ್ಯಗಳಿಂದಾಗಿ ಗಿನ್ನಿಸ್ ವಿಶ್ವ ದಾಖಲೆಗೆ ಸೇರುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ. ಇದು ನಿಜವಾಗಿಯೂ ನನ್ನನ್ನು ನಟನಾಗಿ ಮಾಡಿದೆ. ನೃತ್ಯವು ನನ್ನ ವೃತ್ತಿ ಜೀವನದುದ್ದಕ್ಕೂ ಉತ್ತಮ ಪ್ರಶಂಸೆ ತಂದುಕೊಟ್ಟಿದೆ. ನನ್ನನ್ನು ನಟನಾಗಿ ಮಾಡುವಲ್ಲಿ ನಿರ್ದೇಶಕರು, ನಿರ್ಮಾಪಕರು, ನೃತ್ಯ ಸಂಯೋಜಕರ ಕೊಡುಗೆ ಅಪಾರವಾಗಿದೆ. ಅವರಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದರು.
ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾದ ಚಿರಂಜೀವಿ ಅವರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಹಾಗೂ ಚಿರಂಜೀವಿ ಸಹೋದರ ಪವನ್ ಕಲ್ಯಾಣ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ, ಸೇರಿದಂತೆ ಮತ್ತಿತರ ಸಿನಿ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.
ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…