Nandini Milk: ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರ ₹4 ಹೆಚ್ಚಳ

ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹ 4 ಹೆಚ್ಚಳವಾಗಲಿದ್ದು, ಇದರಲ್ಲಿ ಸರ್ಕಾರ ಅಥವಾ ಕೆಎಂಎಫ್ ಸಂಸ್ಥೆಗೆ ಲಾಭ ಗಳಿಕೆ ಮಾಡಿಕೊಡುವ ಯಾವುದೇ ಉದ್ದೇಶವಿಲ್ಲ. ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ ₹ 46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಡಿನ‌ ಲಕ್ಷಾಂತರ ಹೈನುಗಾರರ ಬದುಕಿಗೆ ಬಲ ತುಂಬುವ ಏಕೈಕ ಉದ್ದೇಶದ ಈ ಪ್ರಯತ್ನಕ್ಕೆ ಸಾರ್ವಜನಿಕರು ಬೆಂಬಲವಾಗಿ ನಿಲ್ಲುತ್ತೀರೆಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಲಕ್ಷಾಂತರ ಹೈನುಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಲ್ಲಿ ಹಾಗೂ ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ಪ್ರಸ್ತುತ ದರ ಏರಿಕೆ ನಿರ್ಧಾರವನ್ನು ರಾಜ್ಯ ಸರ್ಕಾರವು ಕೈಗೊಂಡಿದೆ. ರಾಷ್ಟ್ರದ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಅತ್ಯಂತ ಕಡಿಮೆಯಿದೆ. ರಾಜಧಾನಿ ಸೇರಿದಂತೆ ಪ್ರಮುಖ ರಾಜ್ಯಗಳ ಹಾಲಿನ ದರ ಪಟ್ಟಿ ಈ ಕೆಳಗಿನಂತಿದೆ.

ರಾಜ್ಯ – ಮಾರಾಟ ದರ

ಕೇರಳ- 52

ಗುಜರಾತ್- 53

ದೆಹಲಿ- 55

ಮಹಾರಾಷ್ಟ್ರ- 52

ತೆಲಂಗಾಣ- 58

ಕರ್ನಾಟಕ- 46

ಪ್ರಸ್ತುತ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಹೈನುಗಾರರ ನೆರವಿಗೆ ರಾಜ್ಯ ಸರ್ಕಾರವು ಧಾವಿಸಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ಬೆಲೆ ಏರಿಕೆ ಮಾಡಿದೆ. ಕೆಎಂಎಫ್’ನ ನಂದಿನಿ ಹಾಲಿನ ಬೆಲೆಗೆ ಹೋಲಿಸಿದರೆ ಹೊರರಾಜ್ಯಗಳ ಹಾಲು ಒಕ್ಕೂಟಗಳು ಮಾರಾಟ ಮಾಡುವ ದರ ಹೆಚ್ಚಿನದ್ದಾಗಿದೆ.

ಶುದ್ಧ ಹಾಗೂ ಗುಣಮಟ್ಟದ ದೃಷ್ಟಿಯಲ್ಲಿ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದಲ್ಲೇ ಅತಿಹೆಚ್ಚು ಶ್ಲಾಘನೆಗೆ ಒಳಪಟ್ಟಿವೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಿಂದ ನಂದಿನಿ ಹಾಲು ಹಾಗೂ ಇತರೆ ಉತ್ಪನ್ನಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದ ರಾಜ್ಯದ ಹೈನುಗಾರರಿಗೆ ಉತ್ತೇಜನ ಸಿಗುತ್ತಿದ್ದು, ಇದೀಗ ಸಣ್ಣ ಪ್ರಮಾಣದಲ್ಲಿ ಏರಿಕೆಯಾದ ಹಾಲಿನ ದರವು ನೇರವಾಗಿ ಹೈನುಗಾರರ ಕೈಸೇರುತ್ತಿರುವುದು ಪ್ರೋತ್ಸಾಹಕರವಾಗಿದೆ.

ಹೊರರಾಜ್ಯಗಳ ಹಾಲಿನ ಮಾರಾಟ ದರಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಮಾರಾಟ ದರ ಈಗಲೂ ಅತ್ಯಂತ ಕಡಿಮೆ

ರಾಜ್ಯ – ಮಹಾಮಂಡಲ/ಒಕ್ಕೂಟ – ಮಾರಾಟ ದರ

ಅಸ್ಸಾಂ – ವಮುಲ್ – 60

ಹರಿಯಾಣ -ಅಂಬಲ – 56

ಆಂಧ್ರಪ್ರದೇಶ – ಗುಂಟೂರು – 60

ರಾಜಸ್ತಾನ – ಜೈಪುರ – 50

ಮಧ್ಯಪ್ರದೇಶ – ಭೂಪಾಲ್ – 52

ಪಂಜಾಬ್ – ರೋಪರ್ – 56

ಉತ್ತರಪ್ರದೇಶ – ಲಖನೌ – 56

ಮಹಾರಾಷ್ಟ್ರ- ಕೊಲ್ಲಾಪುರ – 52

ಗುಜರಾತ್ – ಬನಸ್ಕಾಂತ – 53

ಕೇರಳ – ಮಲಬಾರ್ – 52

ಕರ್ನಾಟಕ – ಕೆಎಂಎಫ್ – 42

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

2 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

3 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

4 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

8 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

14 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago