Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ- ಬಸನಗೌಡ ಪಾಟೀಲ್ ಯತ್ನಾಳ್

ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗುಡುಗಿದ್ದಾರೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಕಿಡಿಕಾರಿದ್ದಾರೆ.

ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ  ಪಕ್ಷದ  ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ಅಡ್ಜಸ್ಟ್ಮೆಂಟ್ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ ಎಂದು ತಿಳಿಸಿದ್ದಾರೆ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ  ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ  ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ ಎಂದಿದ್ದಾರೆ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ  ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಶ್ರೀ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು ಎಂದು ತಿಳಿಸಿದ್ದಾರೆ.

ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ.  ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ ಎಂದಿದ್ದಾರೆ.

ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ ಎಂದು ಹೇಳಿದ್ದಾರೆ.

Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

3 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

5 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

9 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

15 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago