ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯವು ದೇಶದಲ್ಲೇ ಮೊದಲು ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎರಡು ವರ್ಷದ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಅಳವಡಿಸಿಕೊಂಡಿತ್ತು. ಆದರೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸದರಿ ಎನ್ಇಪಿ ರದ್ದು ಮಾಡಿ, ರಾಜ್ಯ ಶಿಕ್ಷಣ ನೀತಿ ರೂಪಿಸಲು ಪ್ರಸ್ತುತ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅದೇರೀತಿ ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…