Categories: ಲೇಖನ

” No man’s land “… ಆ ಜಾಗ ಯಾರ ಅಧಿಪತ್ಯಕ್ಕೂ ಒಳಪಟ್ಟಿರುವುದಿಲ್ಲ..

ಯಾರಿಗೂ ಸೇರದ ಜಾಗ, ( ನೋ ಮ್ಯಾನ್ಸ್ ಲ್ಯಾಂಡ್ ) ಒಂದು ಭೂಪ್ರದೇಶದ ಕೆಲವು ಜಾಗಗಳನ್ನು ನೋ ಮ್ಯಾನ್ಸ್ ಲ್ಯಾಂಡ್ ಎಂದು ಕರೆಯಲಾಗುತ್ತದೆ. ಆ ಜಾಗ ಯಾರಿಗೂ ಸೇರಿರುವುದಿಲ್ಲ‌ ಯಾರ ಅಧಿಪತ್ಯಕ್ಕೂ ಒಳಪಟ್ಟಿರುವುದಿಲ್ಲ. ಅದೊಂದು ಸ್ವತಂತ್ರ ಪ್ರದೇಶವಾಗಿರುತ್ತದೆ…..

ಕೆಲವೊಮ್ಮೆ ವಿವಾದಾತ್ಮಕ ಜಾಗವನ್ನು ಸಹ ಈ ರೀತಿಯಲ್ಲಿ ಕರೆಯಲಾಗುತ್ತದೆ. ಅದನ್ನು ತಟಸ್ಥ ಸ್ಥಳವೆಂದು ನಿರ್ಧರಿಸಲಾಗುತ್ತದೆ…….

ಹಾಗೆಯೇ ನಮ್ಮ ಮನಸ್ಸಿನಲ್ಲಿ ಒಂದು ಸ್ವತಂತ್ರ ಜಾಗವನ್ನು ಸದಾ ಮುಕ್ತವಾಗಿ ಇಟ್ಟಿರಬೇಕಾಗುತ್ತದೆ. ಈ ಆಧುನಿಕ ಸಂಕೀರ್ಣ ವ್ಯವಸ್ಥೆಯಲ್ಲಿ ಸಮಚಿತ್ತತೆಯಿಂದ, ಸಮಷ್ಠಿ ಪ್ರಜ್ಞೆಯಿಂದ, ಸ್ಥಿತಪ್ರಜ್ಞತೆಯಿಂದ ವಿಷಯಗಳನ್ನು ಗ್ರಹಿಸಬೇಕು
ಅದು ಯಾವುದೇ ಅಥವಾ ಯಾರದೇ ವಿಷಯವಾಗಿರಲಿ…..

ಹರಿಯಲು ಬಿಡಿ ಮನಸ್ಸನ್ನು
ಭೂಮಿ, ಆಕಾಶ, ಪಾತಾಳದವರೆಗೂ,….

ವಿಹರಿಸಲು ಬಿಡಿ ಮನಸ್ಸನ್ನು
ನೀರು, ಗಾಳಿ, ಬೆಳಕಿನಾಳದಲ್ಲೂ,……

ಅಲೆದಾಡಿಸಿ ಮನಸ್ಸನ್ನು
ಕಾಡು, ಪರ್ವತ, ಬೆಟ್ಟ ಗುಡ್ಡಗಳಲ್ಲೂ…….,

ಸುತ್ತಾಡಿಸಿ ಮನಸ್ಸನ್ನು
ಸೃಷ್ಟಿಯ ಮೂಲೆ ಮೂಲೆಗೂ,….

ಆಗ ನಿಮಗೆ ಸಿಗುವ ಗ್ರಹಿಕೆಯೊಂದಿಗೆ
ಒಳ ಹೊಕ್ಕಿ ನೋಡಿ,…..

ಧರ್ಮ ರಕ್ಷಿಸುತ್ತೇವೆ ಎಂದು ಹೇಳುವವರನ್ನು,

ಧರ್ಮ ವಿರೋಧಿಸುತ್ತೇವೆ ಎಂದು ವಾದಿಸುವವರನ್ನು,

ಆಸ್ತಿಕರ ನಂಬಿಕೆಯನ್ನು,
ನಾಸ್ತಿಕರ ವೈಚಾರಿಕತೆನ್ನು,

ಕೊಲೆ ಮಾಡುವವರ ಮನೋಭಾವವನ್ನು,

ಕೊಲೆಯಾಗುವವರ ಯಾತನೆಯನ್ನು,

ಅತ್ಯಾಚಾರಿಗಳ ಮನೋವ್ಯೆಕಲ್ಯತೆಯನ್ನು,
ನತದೃಷ್ಟೆಯರ ವೇದನೆಯನ್ನು,

ವೇದ, ಮಂತ್ರ ಪಠಿಸುವವರನ್ನು,

ಮೋಸ ಸುಲಿಗೆಯ ವಂಚಕರನ್ನು,

ಮೀಸಲಾತಿ ಪಡೆಯುವವರನ್ನು,

ಮೀಸಲಾತಿ ವಿರೋಧಿಸುವವರನ್ನು,

ಪೂಜಾರಿ, ಮೌಲ್ವಿ, ಫಾದರ್, ಮಠಾದೀಶರುಗಳ ಮನಸ್ಥಿತಿಯನ್ನು,

ಅದನ್ನು ಕೇಳಿ ಆನಂದಿಸುವ ಜನರನ್ನು,

ಅದನ್ನು ದ್ವೇಷಿಸುವ ವ್ಯಕ್ತಿಗಳನ್ನು,

ವ್ಯೆಚಾರಿಕ ಮನೋಭಾವದವರನ್ನು,

ಬುದ್ದಿ ಜೀವಿಗಳನ್ನು,
ರಾಜಕಾರಣಿಗಳನ್ನು, ಮತದಾರರನ್ನು,

ಅಧಿಕಾರಿಗಳನ್ನು,
ಸೇವಕರನ್ನು,

ಬಡವ, ಶ್ರೀಮಂತ, ದರಿದ್ರರನ್ನು,

ನಿರ್ಲಿಪ್ತರನ್ನು, ಆಕ್ರಮಣಕಾರಿಗಳನ್ನು,

ಸ್ವಾತಂತ್ರ್ಯ ಜೀವಿಗಳನ್ನು, ಸ್ವೇಚ್ಚಾಚಾರಿ ಮನೋಭಾವದವರನ್ನು,

ಆಳ ಚಿಂತಕರನ್ನು,
ಉಢಾಪೆ ಮನಸ್ಥಿತಿಯವರನ್ನು,

ಆಗ ಸಿಗಬಹುದು ನಿಮಗೆ ಪ್ರಬುದ್ಧತೆ.

ಅಲ್ಲಿಂದ ಮುಂದೆ …

ನಿಮ್ಮ ಮನಸ್ಸಿನಾಳಕ್ಕೆ ಪ್ರವೇಶಿಸಿ,

ಪ್ರೀತಿ, ದ್ವೇಷ, ಕ್ರೌರ್ಯ, ಕರುಣೆ, ಕಷ್ಟ ಸುಖಗಳನ್ನೂ ಮೀರಿ,
ನವರಸಗಳನ್ನು ಅನುಭವಿಸಿ.

360 ಡಿಗ್ರಿ ಕೋನದಲ್ಲಿ ಆಲೋಚಿಸಿ,

ಅರಿಷಡ್ವರ್ಗಗಳನ್ನು ನಿಯಂತ್ರಿಸಿ,

ಎಲ್ಲವೂ ಅದ ಮೇಲೆ ವಾಸ್ತವ ಲೋಕಕ್ಕೆ ಮರಳಿ,

ಈಗ ಜ್ಞಾನದ ಮೊದಲ ಮೆಟ್ಟಿಲ ಮೇಲಿದ್ದೀರಿ ಅಷ್ಟೇ…

ಸಾಯುವವರೆಗಿನ ನಿಮ್ಮ ಮುಂದಿನ ಬದುಕೇ ವಾಸ್ತವ,

ಸಹಜತೆಯೇ ಸೃಷ್ಟಿಯ ಸತ್ಯ.
ನಾನು, ನೀವು, ಎಲ್ಲರೂ ಅದರ ಅಣುಗಳು ಮಾತ್ರ…..

ಯಾರೋ ಬರೆದ, ಯಾರೋ ಹೇಳಿದ ವಿಷಯಗಳಿಗಿಂತ ನಿಮ್ಮ ಸ್ವಂತ ಅಭಿಪ್ರಾಯವೇ ನಿಮ್ಮನ್ನು ರೂಪಿಸುತ್ತದೆ……

ನಿಮ್ಮ ಮೆದುಳಿನ ಗ್ರಹಿಕೆಯೇ ನಿಮಗೆ ಮಾರ್ಗದರ್ಶನ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

7 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

18 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

19 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

19 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

22 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago