Categories: ಲೇಖನ

” No man’s land “… ಆ ಜಾಗ ಯಾರ ಅಧಿಪತ್ಯಕ್ಕೂ ಒಳಪಟ್ಟಿರುವುದಿಲ್ಲ..

ಯಾರಿಗೂ ಸೇರದ ಜಾಗ, ( ನೋ ಮ್ಯಾನ್ಸ್ ಲ್ಯಾಂಡ್ ) ಒಂದು ಭೂಪ್ರದೇಶದ ಕೆಲವು ಜಾಗಗಳನ್ನು ನೋ ಮ್ಯಾನ್ಸ್ ಲ್ಯಾಂಡ್ ಎಂದು ಕರೆಯಲಾಗುತ್ತದೆ. ಆ ಜಾಗ ಯಾರಿಗೂ ಸೇರಿರುವುದಿಲ್ಲ‌ ಯಾರ ಅಧಿಪತ್ಯಕ್ಕೂ ಒಳಪಟ್ಟಿರುವುದಿಲ್ಲ. ಅದೊಂದು ಸ್ವತಂತ್ರ ಪ್ರದೇಶವಾಗಿರುತ್ತದೆ…..

ಕೆಲವೊಮ್ಮೆ ವಿವಾದಾತ್ಮಕ ಜಾಗವನ್ನು ಸಹ ಈ ರೀತಿಯಲ್ಲಿ ಕರೆಯಲಾಗುತ್ತದೆ. ಅದನ್ನು ತಟಸ್ಥ ಸ್ಥಳವೆಂದು ನಿರ್ಧರಿಸಲಾಗುತ್ತದೆ…….

ಹಾಗೆಯೇ ನಮ್ಮ ಮನಸ್ಸಿನಲ್ಲಿ ಒಂದು ಸ್ವತಂತ್ರ ಜಾಗವನ್ನು ಸದಾ ಮುಕ್ತವಾಗಿ ಇಟ್ಟಿರಬೇಕಾಗುತ್ತದೆ. ಈ ಆಧುನಿಕ ಸಂಕೀರ್ಣ ವ್ಯವಸ್ಥೆಯಲ್ಲಿ ಸಮಚಿತ್ತತೆಯಿಂದ, ಸಮಷ್ಠಿ ಪ್ರಜ್ಞೆಯಿಂದ, ಸ್ಥಿತಪ್ರಜ್ಞತೆಯಿಂದ ವಿಷಯಗಳನ್ನು ಗ್ರಹಿಸಬೇಕು
ಅದು ಯಾವುದೇ ಅಥವಾ ಯಾರದೇ ವಿಷಯವಾಗಿರಲಿ…..

ಹರಿಯಲು ಬಿಡಿ ಮನಸ್ಸನ್ನು
ಭೂಮಿ, ಆಕಾಶ, ಪಾತಾಳದವರೆಗೂ,….

ವಿಹರಿಸಲು ಬಿಡಿ ಮನಸ್ಸನ್ನು
ನೀರು, ಗಾಳಿ, ಬೆಳಕಿನಾಳದಲ್ಲೂ,……

ಅಲೆದಾಡಿಸಿ ಮನಸ್ಸನ್ನು
ಕಾಡು, ಪರ್ವತ, ಬೆಟ್ಟ ಗುಡ್ಡಗಳಲ್ಲೂ…….,

ಸುತ್ತಾಡಿಸಿ ಮನಸ್ಸನ್ನು
ಸೃಷ್ಟಿಯ ಮೂಲೆ ಮೂಲೆಗೂ,….

ಆಗ ನಿಮಗೆ ಸಿಗುವ ಗ್ರಹಿಕೆಯೊಂದಿಗೆ
ಒಳ ಹೊಕ್ಕಿ ನೋಡಿ,…..

ಧರ್ಮ ರಕ್ಷಿಸುತ್ತೇವೆ ಎಂದು ಹೇಳುವವರನ್ನು,

ಧರ್ಮ ವಿರೋಧಿಸುತ್ತೇವೆ ಎಂದು ವಾದಿಸುವವರನ್ನು,

ಆಸ್ತಿಕರ ನಂಬಿಕೆಯನ್ನು,
ನಾಸ್ತಿಕರ ವೈಚಾರಿಕತೆನ್ನು,

ಕೊಲೆ ಮಾಡುವವರ ಮನೋಭಾವವನ್ನು,

ಕೊಲೆಯಾಗುವವರ ಯಾತನೆಯನ್ನು,

ಅತ್ಯಾಚಾರಿಗಳ ಮನೋವ್ಯೆಕಲ್ಯತೆಯನ್ನು,
ನತದೃಷ್ಟೆಯರ ವೇದನೆಯನ್ನು,

ವೇದ, ಮಂತ್ರ ಪಠಿಸುವವರನ್ನು,

ಮೋಸ ಸುಲಿಗೆಯ ವಂಚಕರನ್ನು,

ಮೀಸಲಾತಿ ಪಡೆಯುವವರನ್ನು,

ಮೀಸಲಾತಿ ವಿರೋಧಿಸುವವರನ್ನು,

ಪೂಜಾರಿ, ಮೌಲ್ವಿ, ಫಾದರ್, ಮಠಾದೀಶರುಗಳ ಮನಸ್ಥಿತಿಯನ್ನು,

ಅದನ್ನು ಕೇಳಿ ಆನಂದಿಸುವ ಜನರನ್ನು,

ಅದನ್ನು ದ್ವೇಷಿಸುವ ವ್ಯಕ್ತಿಗಳನ್ನು,

ವ್ಯೆಚಾರಿಕ ಮನೋಭಾವದವರನ್ನು,

ಬುದ್ದಿ ಜೀವಿಗಳನ್ನು,
ರಾಜಕಾರಣಿಗಳನ್ನು, ಮತದಾರರನ್ನು,

ಅಧಿಕಾರಿಗಳನ್ನು,
ಸೇವಕರನ್ನು,

ಬಡವ, ಶ್ರೀಮಂತ, ದರಿದ್ರರನ್ನು,

ನಿರ್ಲಿಪ್ತರನ್ನು, ಆಕ್ರಮಣಕಾರಿಗಳನ್ನು,

ಸ್ವಾತಂತ್ರ್ಯ ಜೀವಿಗಳನ್ನು, ಸ್ವೇಚ್ಚಾಚಾರಿ ಮನೋಭಾವದವರನ್ನು,

ಆಳ ಚಿಂತಕರನ್ನು,
ಉಢಾಪೆ ಮನಸ್ಥಿತಿಯವರನ್ನು,

ಆಗ ಸಿಗಬಹುದು ನಿಮಗೆ ಪ್ರಬುದ್ಧತೆ.

ಅಲ್ಲಿಂದ ಮುಂದೆ …

ನಿಮ್ಮ ಮನಸ್ಸಿನಾಳಕ್ಕೆ ಪ್ರವೇಶಿಸಿ,

ಪ್ರೀತಿ, ದ್ವೇಷ, ಕ್ರೌರ್ಯ, ಕರುಣೆ, ಕಷ್ಟ ಸುಖಗಳನ್ನೂ ಮೀರಿ,
ನವರಸಗಳನ್ನು ಅನುಭವಿಸಿ.

360 ಡಿಗ್ರಿ ಕೋನದಲ್ಲಿ ಆಲೋಚಿಸಿ,

ಅರಿಷಡ್ವರ್ಗಗಳನ್ನು ನಿಯಂತ್ರಿಸಿ,

ಎಲ್ಲವೂ ಅದ ಮೇಲೆ ವಾಸ್ತವ ಲೋಕಕ್ಕೆ ಮರಳಿ,

ಈಗ ಜ್ಞಾನದ ಮೊದಲ ಮೆಟ್ಟಿಲ ಮೇಲಿದ್ದೀರಿ ಅಷ್ಟೇ…

ಸಾಯುವವರೆಗಿನ ನಿಮ್ಮ ಮುಂದಿನ ಬದುಕೇ ವಾಸ್ತವ,

ಸಹಜತೆಯೇ ಸೃಷ್ಟಿಯ ಸತ್ಯ.
ನಾನು, ನೀವು, ಎಲ್ಲರೂ ಅದರ ಅಣುಗಳು ಮಾತ್ರ…..

ಯಾರೋ ಬರೆದ, ಯಾರೋ ಹೇಳಿದ ವಿಷಯಗಳಿಗಿಂತ ನಿಮ್ಮ ಸ್ವಂತ ಅಭಿಪ್ರಾಯವೇ ನಿಮ್ಮನ್ನು ರೂಪಿಸುತ್ತದೆ……

ನಿಮ್ಮ ಮೆದುಳಿನ ಗ್ರಹಿಕೆಯೇ ನಿಮಗೆ ಮಾರ್ಗದರ್ಶನ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

3 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

5 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

5 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

6 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

10 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

11 hours ago