NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣಾ ನಾಯ್ಕ್, ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ್ ಹಾಗೂ ಕೆಆರ್‌ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕೃಷ್ಣಾ ನಾಯ್ಕ್ ಅವರಿಗೆ ಸೇರಿದ ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ ಎರಡು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸಿದ್ದೇಶ್ವರ ಹೆಬ್ಬಾಳ್ ಅವರಿಗೆ ಸಂಬಂಧಿಸಿದ ದಾವಣಗೆರೆಯ ಸರಸ್ವತಿ ನಗರ ಹಾಗೂ ಆಂಜನೇಯ ಬಡಾವಣೆಯ ನಿವಾಸಗಳಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಸಣ್ಣ ಕೆಂಚಪ್ಪ ಅವರಿಗೆ ಸೇರಿದ ದಾವಣಗೆರೆಯ ಶಿವಕುಮಾರ್ ಬಡಾವಣೆಯ ಮನೆ ಹಾಗೂ ಹರಪನಹಳ್ಳಿಯ ಮತ್ತೊಂದು ನಿವಾಸದ ಮೇಲೂ ದಾಳಿ ನಡೆದಿದೆ.

ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ ಹಾಗೂ ವಿಜಯನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಒಟ್ಟು 12 ತಂಡಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿವೆ. ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

ಇದೇ ವೇಳೆ ಸಿದ್ದೇಶ್ವರ ಹೆಬ್ಬಾಳ್ ಅವರ ನಿವಾಸದಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ ಹಾಗೂ ಬೆಳ್ಳಿ ಆಭರಣಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ದಾಖಲೆಗಳು, ಆಸ್ತಿ ವಿವರಗಳು ಹಾಗೂ ಬ್ಯಾಂಕ್ ವ್ಯವಹಾರಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ಬಳಿಕ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

41 minutes ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

2 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

13 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

15 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago