#PahalgamTerroristAttac ಪಹಲ್ಗಾಮ್‌ ಭಯೋತ್ಪಾದಕ ದಾಳಿ: ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಹೇಳಿದ್ದಾರೆ.

ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ ಎಂದರು.

ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮ್‌ನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

6 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

9 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

15 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

16 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago