PTCL ಕಾಯ್ದೆ ವಿಚಾರ: ಪ್ರಜಾ ವಿಮೋಚನಾ ಚಳವಳಿ ಸಂಘಟನೆ ವತಿಯಿಂದ ಜ.6 ರಿಂದ ನಿರತಂರ ಪ್ರತಿಭಟನೆ

ರಾಜ್ಯ ಸರ್ಕಾರ PTCL ಕಾಯ್ದೆಗೆ 2023ದಲ್ಲಿ ತಿದ್ದುಪಡಿ ಮಾಡಿದ್ದರೂ ಸಹ ಉಚ್ಚನ್ಯಾಯಲಯ ಕಾಯ್ದೆ ವಿರುದ್ಧವಾಗಿ ಆದೇಶಗಳನ್ನು ಮಾಡುತ್ತಿರುವುದರಿಂದ ಮುಖ್ಯಮಂತ್ರಿ ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಹಿರಿಯ ನ್ಯಾಯವಾದಿಗಳ ತಂಡ ರಚಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ಮತ್ತು ಆದೇಶವಾಗುವ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿ ಜನವರಿ 06 ರಿಂದ ನಿರಂತರ ಪ್ರತಿಭಟನೆ ನಡೆಸುವುದಾಗಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಆನೇಕಲ್ ಕೃಷ್ಣಪ್ಪ ತಿಳಿಸಿದರು.

ದೇವನಹಳ್ಳಿ ಪಟ್ಟಣದ ಜಿಲ್ಲಾ ಕಾರ್ಯನಿರತ  ಪತ್ರಕರ್ತರ ಸಂಘದಲ್ಲಿ ಪ್ರಜಾ ವಿಮೋಚನಾ ಚಳವಳಿ (ರಿ) PVC ರಾಜ್ಯ ಸಮಿತಿ – ಕರ್ನಾಟಕ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಖ್ಯವಾಗಿ PTCL ಕಾಯ್ದೆಯು ತುಳಿತಕ್ಕೊಳಗಾದ ಜನಾಂಗದ ಅಭಿವೃದ್ಧಿ ಮತ್ತು ಉದ್ದಾರಕೋಸ್ಕರ ಸರ್ಕಾರ 1978-79ರಲ್ಲಿ ಕಾಯ್ದೆ ಜಾರಿಗೆ ತಂದ ನಂತರ SC/ST ಜನರಿಗೆ ಮಾಂಜೂರಾದ ಜಮೀನುಗಳನ್ನು ಪರಬಾರೆ ಮಾಡಲು ಸರ್ಕಾರದ ಪೂರ್ವನುಮತಿ ಕಡ್ಡಾಯ ಎಂಬ ಷರತ್ತು ಇತ್ತು. ಕಾಯ್ದೆ ಉಲ್ಲಂಘಿಸಿ ಭೂಮಿ ಪರಬಾರೆ ಅಗಿದ್ದಲ್ಲಿ ಮರು ಮಂಜೂರಾತಿ ಕೋರಿ ಮಂಜೂರುದಾರರು ACರವರಿಗೆ ಅರ್ಜಿ ಸಲ್ಲಿಸಲು ಕಾಲಮಿತಿ ಇರಲಿಲ್ಲ. ಆದರೆ, ನೆಕ್ಕಂಟಿ ರಾಮಲಕ್ಷ್ಮೀ V/S ಕರ್ನಾಟಕ ಸರ್ಕಾರದ ಪ್ರಕರಣ ಸಂಖ್ಯೆ APPEAL NO. 139002009 ದಿ: 26-10-2017ರಲ್ಲಿ ಸರ್ವೋಚ್ಚ ನ್ಯಾಯಲಯ “ಸಮುಚಿತ ಸಮಯದೊಳಗೆ” ಅರ್ಜಿ ಸಲ್ಲಿಸಬೇಕೆಂದು ಆದೇಶ ಮಾಡಿದ್ದು ನಿರ್ದಿಷ್ಟವಾಗಿ ಇಂತಿಷ್ಟು ವರ್ಷಗಳು ಎಂದು ಹೇಳದಿದ್ದರು ಈ ಆದೇಶದ ನಂತರ AC, DC ಉಚ್ಚನ್ಯಾಯಗಳಲ್ಲಿ ದಾಖಲಿಸಿದ್ದ ಸಾವಿರಾರು ಪ್ರಕರಣಗಳು ಕಾಯ್ದೆ ವಿರುದ್ಧವಾಗಿ ಆದೇಶಗಳಾಗಿರುವುದನ್ನು ಖಂಡಿಸಿ ಕಾಲಮಿತಿ ರದ್ದುಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ 2022ರಲ್ಲಿ ರಾಜ್ಯಾದ್ಯಾಂತ ದಲಿತ ಚಳವಳಿಗಾರರು ಹೋರಟಗಳನ್ನು ನಡೆಸಲಾಗಿತ್ತು ಎಂದು ಹೇಳಿದರು.

ಪ್ರಜಾವಿಮೋಚನಾ ಚಳುವಳಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆದೂರು ದೇವರಾಜ್ ಮಾತನಾಡಿ, ಕ್ರಾಂಗೆಸ್ ಪಕ್ಷದ ಸರ್ಕಾರ ರಚನೆಯಾಗಿ  ಸಿದ್ದಾರಾಮಯ್ಯ ಮುಖ್ಯಮಂತ್ರಿಗಳಾದ ನಂತರ ಕಾಲಮಿತಿ ಇಲ್ಲವೆಂದು PTCL ಕಾಯ್ದೆಗೆ ತಿದ್ದುಪಡಿಯನ್ನು ಮೊದಲ ಸಂಪುಟದ ಸಭೆಯಲ್ಲಿ ಮಂಡಿಸಿ ದಿನಾಂಕ : 27-07-2023ರಲ್ಲಿ ಜಾರಿಗೊಳಿಸಿದರು ಇದರಿಂದ ರಾಜ್ಯದ ಲಕ್ಷಾಂತರ SC/ST ಕುಟುಂಬಗಳಿಗೆ ಆರ್ಥಿಕ ಸ್ವಾವಲಂಬನೆಯ ಮಾರ್ಗ ಕಲ್ಪಿಸಿದ ಸ್ವಾಗತಾರ್ಹ ವಿಷಯವೇ ಆಗಿತ್ತು ಎಂದರು.

ರಾಜ್ಯ ಸರ್ಕಾರ PTCL ಕಾಯ್ದೆಗೆ ಕಾಲಮಿತಿ ಇಲ್ಲ ಎಂದು ತಿದ್ದುಪಡಿ ತಂದಿರುವುದನ್ನು ಉಚ್ಚನ್ಯಾಯಲಯ ಪರಿಗಣಿಸದೆ ಕಾಯ್ದೆ ವಿರುದ್ಧವಾಗಿ 2024 ನವಂಬರ್ ತಿಂಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಆದೇಶಗಳನ್ನು ಮಾಡಿದ್ದು ಪ್ರತಿ ದಿನ ಹತ್ತಾರು ಪ್ರಕರಣಗಳನ್ನು ಸರ್ವೋಚ್ಚ ನ್ಯಾಯಲಯದ ನೆಕ್ಕಂಟಿ ರಾಮಲಕ್ಷ್ಮೀ V/S ಕರ್ನಾಟಕ ಸರ್ಕಾರದ ತಿರ್ಪಿನ ಆದೇಶ ಉಲ್ಲೇಖಿಸಿ ವಜಾ ಮಾಡಲಾಗುತ್ತಿದೆ. ಆದ್ದರಿಂದ ಉಚ್ಚನ್ಯಾಯಲಯ ಕಾಯ್ದೆ ವಿರುದ್ಧವಾಗಿ ಆದೇಶಗಳನ್ನು ಮಾಡುತ್ತಿರುವುದರಿಂದ ರಾಜ್ಯದ ಲಕ್ಷಾಂತರ SC/ST ಜಾತಿಗಳ ಕುಟುಂಬಗಳು ಬೀದಿಪಾಲಾಗುವ ಸನ್ನವೇಶ ಸೃಷ್ಟಿಯಾಗಿರುವುದನ್ನು  ಮುಖ್ಯಮಂತ್ರಿಗಳು, ಕಂದಾಯ ಮಂತ್ರಿಗಳು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಹಿರಿಯ ನ್ಯಾಯವಾದಿಗಳ ತಂಡ ರಚಿಸಿ ಶಿಘ್ರವಾಗಿ ಸರ್ವೋಚ್ಚ ನ್ಯಾಯಲಯದಲ್ಲಿ REVIEW PETITION ಅನ್ನು ಸರ್ಕಾರದ ಮೂಲಕ ಹಾಕಲು ವ್ಯವಸ್ಥೆ ಮಾಡಬೇಕು ಎಂದು ಸರ್ಕಾರವನ್ನು PVC ಒತ್ತಾಯಿಸುತ್ತದೆ ಎಂದರು.

ಮೀಸಲು ಕ್ಷೇತ್ರಗಳಲ್ಲಿ ಗೆದ್ದಿರುವ ಎಲ್ಲಾ ಮಂತ್ರಿಗಳು, ಶಾಸಕರ ಮೇಲೆ ಒತ್ತಡ ತರುವ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸಬೇಕೆಂದು ಮನವಿ ಮಾಡಿದರು ಹಾಗೂ  ಲೋಕಜ್ಞಾನವಿಲ್ಲದ ಶಿಕ್ಷಣವಂಚಿತ ಸಮುದಾಯದವರ ಆರ್ಥಿಕಸಬಲತೆ ಮತ್ತು ಜೀವನೋಪಾಯದ ಉದ್ದೇಶದೊಂದಿಗೆ ಈ ಯೋಜನೆ  ಜಾರಿಗೆ ತರಲಾಗಿದೆ ಇದಕ್ಕೆ ವಿರುದ್ದವಾಗಿ ಹಲವಾರು ತಿದ್ದುಪಡಿಗಳು ಬಂದಿರುವ ಹಿನ್ನಲೆ  ತರಾತುರಿಯ ಕೋಟ್೯ ನಿರ್ಧಾರ ನಮ್ಮಂತಹ ಸಮುದಾಯಗಳನ್ನು ಹಿಂದೆಯೇ ಉಳಿಯುವಂತೆ ಮಾಡುತ್ತಿದೆ ಹಾಗಾಗಿ ಸರ್ಕಾರ ಒಂದು ತನಿಖೆ ಮಾಡಿ ಮೇಲ್ಮನವಿ ಮಾಡಿ ತಿದ್ದುಪಡಿ ಮಾಡಬೇಕು ,ಇಲ್ಲವಾದಲ್ಲಿ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಪ್ರಜಾ ವಿಮೋಚನಾ ಚಳುವಳಿ ಸಂಘಟನೆಯ ಪದಾಧಿಕಾರಿಗಳಾದ ಮಮತಾ , ಶ್ರೀನಿವಾಸ್, ಹೆಬ್ಬಾಳ ಮುನಿರಾಜು, ರವಿ ಸೇರಿದಂತೆ ಸಂಘಟನಾ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ – ಸಚಿವ ಚಲುವರಾಯಸ್ವಾಮಿ

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…

4 hours ago

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

7 hours ago

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…

10 hours ago

ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…

10 hours ago

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

23 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

1 day ago