PTCL ಕಾಯ್ದೆ ವಿಚಾರ: ಪ್ರಜಾ ವಿಮೋಚನಾ ಚಳವಳಿ ಸಂಘಟನೆ ವತಿಯಿಂದ ಜ.6 ರಿಂದ ನಿರತಂರ ಪ್ರತಿಭಟನೆ

ರಾಜ್ಯ ಸರ್ಕಾರ PTCL ಕಾಯ್ದೆಗೆ 2023ದಲ್ಲಿ ತಿದ್ದುಪಡಿ ಮಾಡಿದ್ದರೂ ಸಹ ಉಚ್ಚನ್ಯಾಯಲಯ ಕಾಯ್ದೆ ವಿರುದ್ಧವಾಗಿ ಆದೇಶಗಳನ್ನು ಮಾಡುತ್ತಿರುವುದರಿಂದ ಮುಖ್ಯಮಂತ್ರಿ ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಹಿರಿಯ ನ್ಯಾಯವಾದಿಗಳ ತಂಡ ರಚಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ಮತ್ತು ಆದೇಶವಾಗುವ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿ ಜನವರಿ 06 ರಿಂದ ನಿರಂತರ ಪ್ರತಿಭಟನೆ ನಡೆಸುವುದಾಗಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಆನೇಕಲ್ ಕೃಷ್ಣಪ್ಪ ತಿಳಿಸಿದರು.

ದೇವನಹಳ್ಳಿ ಪಟ್ಟಣದ ಜಿಲ್ಲಾ ಕಾರ್ಯನಿರತ  ಪತ್ರಕರ್ತರ ಸಂಘದಲ್ಲಿ ಪ್ರಜಾ ವಿಮೋಚನಾ ಚಳವಳಿ (ರಿ) PVC ರಾಜ್ಯ ಸಮಿತಿ – ಕರ್ನಾಟಕ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಖ್ಯವಾಗಿ PTCL ಕಾಯ್ದೆಯು ತುಳಿತಕ್ಕೊಳಗಾದ ಜನಾಂಗದ ಅಭಿವೃದ್ಧಿ ಮತ್ತು ಉದ್ದಾರಕೋಸ್ಕರ ಸರ್ಕಾರ 1978-79ರಲ್ಲಿ ಕಾಯ್ದೆ ಜಾರಿಗೆ ತಂದ ನಂತರ SC/ST ಜನರಿಗೆ ಮಾಂಜೂರಾದ ಜಮೀನುಗಳನ್ನು ಪರಬಾರೆ ಮಾಡಲು ಸರ್ಕಾರದ ಪೂರ್ವನುಮತಿ ಕಡ್ಡಾಯ ಎಂಬ ಷರತ್ತು ಇತ್ತು. ಕಾಯ್ದೆ ಉಲ್ಲಂಘಿಸಿ ಭೂಮಿ ಪರಬಾರೆ ಅಗಿದ್ದಲ್ಲಿ ಮರು ಮಂಜೂರಾತಿ ಕೋರಿ ಮಂಜೂರುದಾರರು ACರವರಿಗೆ ಅರ್ಜಿ ಸಲ್ಲಿಸಲು ಕಾಲಮಿತಿ ಇರಲಿಲ್ಲ. ಆದರೆ, ನೆಕ್ಕಂಟಿ ರಾಮಲಕ್ಷ್ಮೀ V/S ಕರ್ನಾಟಕ ಸರ್ಕಾರದ ಪ್ರಕರಣ ಸಂಖ್ಯೆ APPEAL NO. 139002009 ದಿ: 26-10-2017ರಲ್ಲಿ ಸರ್ವೋಚ್ಚ ನ್ಯಾಯಲಯ “ಸಮುಚಿತ ಸಮಯದೊಳಗೆ” ಅರ್ಜಿ ಸಲ್ಲಿಸಬೇಕೆಂದು ಆದೇಶ ಮಾಡಿದ್ದು ನಿರ್ದಿಷ್ಟವಾಗಿ ಇಂತಿಷ್ಟು ವರ್ಷಗಳು ಎಂದು ಹೇಳದಿದ್ದರು ಈ ಆದೇಶದ ನಂತರ AC, DC ಉಚ್ಚನ್ಯಾಯಗಳಲ್ಲಿ ದಾಖಲಿಸಿದ್ದ ಸಾವಿರಾರು ಪ್ರಕರಣಗಳು ಕಾಯ್ದೆ ವಿರುದ್ಧವಾಗಿ ಆದೇಶಗಳಾಗಿರುವುದನ್ನು ಖಂಡಿಸಿ ಕಾಲಮಿತಿ ರದ್ದುಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ 2022ರಲ್ಲಿ ರಾಜ್ಯಾದ್ಯಾಂತ ದಲಿತ ಚಳವಳಿಗಾರರು ಹೋರಟಗಳನ್ನು ನಡೆಸಲಾಗಿತ್ತು ಎಂದು ಹೇಳಿದರು.

ಪ್ರಜಾವಿಮೋಚನಾ ಚಳುವಳಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆದೂರು ದೇವರಾಜ್ ಮಾತನಾಡಿ, ಕ್ರಾಂಗೆಸ್ ಪಕ್ಷದ ಸರ್ಕಾರ ರಚನೆಯಾಗಿ  ಸಿದ್ದಾರಾಮಯ್ಯ ಮುಖ್ಯಮಂತ್ರಿಗಳಾದ ನಂತರ ಕಾಲಮಿತಿ ಇಲ್ಲವೆಂದು PTCL ಕಾಯ್ದೆಗೆ ತಿದ್ದುಪಡಿಯನ್ನು ಮೊದಲ ಸಂಪುಟದ ಸಭೆಯಲ್ಲಿ ಮಂಡಿಸಿ ದಿನಾಂಕ : 27-07-2023ರಲ್ಲಿ ಜಾರಿಗೊಳಿಸಿದರು ಇದರಿಂದ ರಾಜ್ಯದ ಲಕ್ಷಾಂತರ SC/ST ಕುಟುಂಬಗಳಿಗೆ ಆರ್ಥಿಕ ಸ್ವಾವಲಂಬನೆಯ ಮಾರ್ಗ ಕಲ್ಪಿಸಿದ ಸ್ವಾಗತಾರ್ಹ ವಿಷಯವೇ ಆಗಿತ್ತು ಎಂದರು.

ರಾಜ್ಯ ಸರ್ಕಾರ PTCL ಕಾಯ್ದೆಗೆ ಕಾಲಮಿತಿ ಇಲ್ಲ ಎಂದು ತಿದ್ದುಪಡಿ ತಂದಿರುವುದನ್ನು ಉಚ್ಚನ್ಯಾಯಲಯ ಪರಿಗಣಿಸದೆ ಕಾಯ್ದೆ ವಿರುದ್ಧವಾಗಿ 2024 ನವಂಬರ್ ತಿಂಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಆದೇಶಗಳನ್ನು ಮಾಡಿದ್ದು ಪ್ರತಿ ದಿನ ಹತ್ತಾರು ಪ್ರಕರಣಗಳನ್ನು ಸರ್ವೋಚ್ಚ ನ್ಯಾಯಲಯದ ನೆಕ್ಕಂಟಿ ರಾಮಲಕ್ಷ್ಮೀ V/S ಕರ್ನಾಟಕ ಸರ್ಕಾರದ ತಿರ್ಪಿನ ಆದೇಶ ಉಲ್ಲೇಖಿಸಿ ವಜಾ ಮಾಡಲಾಗುತ್ತಿದೆ. ಆದ್ದರಿಂದ ಉಚ್ಚನ್ಯಾಯಲಯ ಕಾಯ್ದೆ ವಿರುದ್ಧವಾಗಿ ಆದೇಶಗಳನ್ನು ಮಾಡುತ್ತಿರುವುದರಿಂದ ರಾಜ್ಯದ ಲಕ್ಷಾಂತರ SC/ST ಜಾತಿಗಳ ಕುಟುಂಬಗಳು ಬೀದಿಪಾಲಾಗುವ ಸನ್ನವೇಶ ಸೃಷ್ಟಿಯಾಗಿರುವುದನ್ನು  ಮುಖ್ಯಮಂತ್ರಿಗಳು, ಕಂದಾಯ ಮಂತ್ರಿಗಳು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ಹಿರಿಯ ನ್ಯಾಯವಾದಿಗಳ ತಂಡ ರಚಿಸಿ ಶಿಘ್ರವಾಗಿ ಸರ್ವೋಚ್ಚ ನ್ಯಾಯಲಯದಲ್ಲಿ REVIEW PETITION ಅನ್ನು ಸರ್ಕಾರದ ಮೂಲಕ ಹಾಕಲು ವ್ಯವಸ್ಥೆ ಮಾಡಬೇಕು ಎಂದು ಸರ್ಕಾರವನ್ನು PVC ಒತ್ತಾಯಿಸುತ್ತದೆ ಎಂದರು.

ಮೀಸಲು ಕ್ಷೇತ್ರಗಳಲ್ಲಿ ಗೆದ್ದಿರುವ ಎಲ್ಲಾ ಮಂತ್ರಿಗಳು, ಶಾಸಕರ ಮೇಲೆ ಒತ್ತಡ ತರುವ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸಬೇಕೆಂದು ಮನವಿ ಮಾಡಿದರು ಹಾಗೂ  ಲೋಕಜ್ಞಾನವಿಲ್ಲದ ಶಿಕ್ಷಣವಂಚಿತ ಸಮುದಾಯದವರ ಆರ್ಥಿಕಸಬಲತೆ ಮತ್ತು ಜೀವನೋಪಾಯದ ಉದ್ದೇಶದೊಂದಿಗೆ ಈ ಯೋಜನೆ  ಜಾರಿಗೆ ತರಲಾಗಿದೆ ಇದಕ್ಕೆ ವಿರುದ್ದವಾಗಿ ಹಲವಾರು ತಿದ್ದುಪಡಿಗಳು ಬಂದಿರುವ ಹಿನ್ನಲೆ  ತರಾತುರಿಯ ಕೋಟ್೯ ನಿರ್ಧಾರ ನಮ್ಮಂತಹ ಸಮುದಾಯಗಳನ್ನು ಹಿಂದೆಯೇ ಉಳಿಯುವಂತೆ ಮಾಡುತ್ತಿದೆ ಹಾಗಾಗಿ ಸರ್ಕಾರ ಒಂದು ತನಿಖೆ ಮಾಡಿ ಮೇಲ್ಮನವಿ ಮಾಡಿ ತಿದ್ದುಪಡಿ ಮಾಡಬೇಕು ,ಇಲ್ಲವಾದಲ್ಲಿ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಪ್ರಜಾ ವಿಮೋಚನಾ ಚಳುವಳಿ ಸಂಘಟನೆಯ ಪದಾಧಿಕಾರಿಗಳಾದ ಮಮತಾ , ಶ್ರೀನಿವಾಸ್, ಹೆಬ್ಬಾಳ ಮುನಿರಾಜು, ರವಿ ಸೇರಿದಂತೆ ಸಂಘಟನಾ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

3 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago