Public Mirchi Big Impact: ಇ-ಖಾತಾ ನೀಡಲು ಲಂಚ ಪಡೆದಿದ್ದ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ ಅಮಾನತು

ಇ ಸ್ವತ್ತು ನೀಡಲು ಲಂಚ ಪಡೆದಿದ್ದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ ಆಗಿದ್ದ ಶಿವಾನಂದ ಮರಿಕೇರಿ ಅಮಾನತುಗೊಂಡಿದ್ದಾರೆ. ಪ್ರಸ್ತುತ ಸಾಸಲು ಗ್ರಾಮ ಪಂಚಾಯಿತಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.

ಲಂಚ ಸ್ವೀಕರಿಸಿರುವುದನ್ನು ಒಪ್ಪಿಕೊಂಡು ತಪ್ಪಾಯ್ತು ಎಂದು ಕ್ಷಮೆ ಕೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ‌ ಫುಲ್ ವೈರಲ್ ಆಗಿತ್ತು.

ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ ಆಗಿದ್ದ ಶಿವಾನಂದ ಮರಿಕೇರಿ ಅವರು ಇ ಸ್ವತ್ತು ನೀಡಲು ಲಂಚ ಪಡೆದಿರುವ ಕುರಿತು ಪಬ್ಲಿಕ್‌ ಮಿರ್ಚಿ ವರದಿ ಮಾಡಿತ್ತು.

ಕೂಡಲೇ ಎಚ್ಚೆತ್ತುಕೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಡಾ.ಎನ್ ಅನುರಾಧಾ ಅವರು ಪಿಡಿಒ ಶಿವಾನಂದ ಮರಿಕೇರಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ….

ವರ್ಗಾವಣೆ ಆಗಿದ್ದೇನೆ ಕೂಡಲೇ ಇ ಸ್ವತ್ತು ತೆಗೆದುಕೊಂಡು ಹೋಗಿ ಎಂದು ಹಣಕ್ಕೆ ಬೇಡಿಕೆ ಇಟ್ಟು, 10 ಸಾವಿರ ಹಣವನ್ನ ಸ್ನೇಹಿತನಿಗೆ ಫೋನ್ ಪೇ ಮಾಡಿಸಿಕೊಂಡಿರುವುದಾಗಿ ತಿಳಿದುಬಂದಿತ್ತು.

ಸಾಕ್ಷಿ ಸಮೇತ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪಿಡಿಒ ಅವರಿಗೆ ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದರೆ. ಈ ವೇಳೆ ಪಿಡಿಒ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದರು.

ಈ ಮೊದಲು ಕೂಡ ಪಿಡಿಒ ಅವರು ಇ-ಖಾತಾ ಮಾಡಿಕೊಡಲು ಹಾದ್ರಿಪುರ ಗ್ರಾಮಸ್ಥರಿಂದ ಲಂಚ ಪಡೆದು ಖಾತೆ ಮಾಡಿಕೊಡದೇ ಅಲೆದಾಡಿಸಿದ್ದಾರು. ಈ ಕುರಿತು ಶಾಸಕ ಧೀರಜ್ ಮುನಿರಾಜ್ ಅವರ ಗಮನಕ್ಕೆ ಬಂದಿತ್ತು. ಶಾಸಕರು ಈ ಪಿಡಿಒ ಅವರಿಗೆ ವಾರ್ನ್ ಕೂಡ ಮಾಡಿದ್ದರು. ಇಷ್ಟಾದರೂ ಬುದ್ಧಿ ಕಲಿಯದ ಈ ಪಿಡಿಒ ಮತ್ತೆ ಲಂಚದ ಹುತ್ತಕ್ಕೆ ಕೈಹಾಕುತ್ತಲೇ ಬಂದಿದ್ದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 hour ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

3 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

7 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago