RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಘಟನೆಗೆ ಭದ್ರತಾ ಲೋಪದ ಆರೋಪ ಮೇರೆಗೆ ಅಂದಿನ ಬೆಂಗಳೂರು ಆಯುಕ್ತ ಬಿ.ದಯಾನಂದ್‌, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್‌, ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್‌ಪೆಕ್ಟರ್‌ ಎ.ಕೆ.ಗಿರೀಶ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ರಾಜ್ಯ ಸರ್ಕಾರ ತಾನೇ ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತ ದುರಂತಕ್ಕೆ ಪೊಲಿಸರೇ ನಿರ್ಲಕ್ಷ್ಯ ಕಾರಣ ಎಂದಿದ್ದ ರಾಜ್ಯ ಸರ್ಕಾರ ಇದೀಗ ದಿಢೀರ್ ಅಮಾನತು ಆದೇಶ ಹಿಂಪಡೆದುಕೊಂಡಿರುವುದು ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್‌, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಏಕಾಏಕಿ ರಾಜ್ಯ ಸರ್ಕಾರ ಯುಟರ್ನ್ ಹೊಡೆದಿದ್ದು, ಪೊಲಿಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದೆ.

ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

ವಿಕಾಸ್ ಕುಮಾರ್ ತಮ್ಮ ಅಮಾನತು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಸಿಎಟಿ ಮೊರೆ ಹೋಗಿದ್ದರು. ಇದನ್ನ ವಿಚಾರಣೆ ನಡೆಸಿದ್ದ ಸಿಎಟಿ, ವಿಕಾಶ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

3 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

8 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

8 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

16 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago