RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಘಟನೆಗೆ ಭದ್ರತಾ ಲೋಪದ ಆರೋಪ ಮೇರೆಗೆ ಅಂದಿನ ಬೆಂಗಳೂರು ಆಯುಕ್ತ ಬಿ.ದಯಾನಂದ್‌, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್‌, ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್‌ಪೆಕ್ಟರ್‌ ಎ.ಕೆ.ಗಿರೀಶ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ರಾಜ್ಯ ಸರ್ಕಾರ ತಾನೇ ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತ ದುರಂತಕ್ಕೆ ಪೊಲಿಸರೇ ನಿರ್ಲಕ್ಷ್ಯ ಕಾರಣ ಎಂದಿದ್ದ ರಾಜ್ಯ ಸರ್ಕಾರ ಇದೀಗ ದಿಢೀರ್ ಅಮಾನತು ಆದೇಶ ಹಿಂಪಡೆದುಕೊಂಡಿರುವುದು ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್‌, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಏಕಾಏಕಿ ರಾಜ್ಯ ಸರ್ಕಾರ ಯುಟರ್ನ್ ಹೊಡೆದಿದ್ದು, ಪೊಲಿಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದೆ.

ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

ವಿಕಾಸ್ ಕುಮಾರ್ ತಮ್ಮ ಅಮಾನತು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಸಿಎಟಿ ಮೊರೆ ಹೋಗಿದ್ದರು. ಇದನ್ನ ವಿಚಾರಣೆ ನಡೆಸಿದ್ದ ಸಿಎಟಿ, ವಿಕಾಶ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

2 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

12 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

12 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

23 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

23 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago