ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಘಟನೆಗೆ ಭದ್ರತಾ ಲೋಪದ ಆರೋಪ ಮೇರೆಗೆ ಅಂದಿನ ಬೆಂಗಳೂರು ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್, ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಎ.ಕೆ.ಗಿರೀಶ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ರಾಜ್ಯ ಸರ್ಕಾರ ತಾನೇ ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತ ದುರಂತಕ್ಕೆ ಪೊಲಿಸರೇ ನಿರ್ಲಕ್ಷ್ಯ ಕಾರಣ ಎಂದಿದ್ದ ರಾಜ್ಯ ಸರ್ಕಾರ ಇದೀಗ ದಿಢೀರ್ ಅಮಾನತು ಆದೇಶ ಹಿಂಪಡೆದುಕೊಂಡಿರುವುದು ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಏಕಾಏಕಿ ರಾಜ್ಯ ಸರ್ಕಾರ ಯುಟರ್ನ್ ಹೊಡೆದಿದ್ದು, ಪೊಲಿಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದೆ.
ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.
ವಿಕಾಸ್ ಕುಮಾರ್ ತಮ್ಮ ಅಮಾನತು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಸಿಎಟಿ ಮೊರೆ ಹೋಗಿದ್ದರು. ಇದನ್ನ ವಿಚಾರಣೆ ನಡೆಸಿದ್ದ ಸಿಎಟಿ, ವಿಕಾಶ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…