ಬೆಂಗಳೂರು ತಂಡದ ಉತ್ತಮ ಬೌಲಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವನ್ನು 59 ರನ್ ಗೆ ಆಲ್ ಔಟ್ ಮಾಡಿ 127 ರನ್ ಗಳ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿಯು ಹೋರಾಟದ ಟಾರ್ಗೆಟ್ ನೀಡಿತು. ಆರಂಭಿಕ ಬ್ಯಾಟ್ಸಮನ್ ಗಳ ಅರ್ಧ ಶತಕದ ಜೊತೆಯಾಟದ ನಂತರ ವಿರಾಟ್ ಕೊಹ್ಲಿ ಅವರು ಕೆ.ಎಮ್ ಆಸೀಫ್ ಗೆ ವಿಕೆಟ್ ಒಪ್ಪಿಸಿದರು. ದುಫ಼್ಲೆಸಿಸ್ (55), ಮ್ಯಾಕ್ಸ್ ವೆಲ್ (54), ಅನುಜ್ ರಾವತ್(29) ರವರ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿದರು.
ಟಾರ್ಗೆಟ್ ಬೆನ್ನತ್ತಿದ ರಾಜಸ್ತಾನ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಯಶಸ್ವಿ ಜೈಸ್ವಲ್(0), ಜೋಸ್ ಬಟ್ಲರ್ (0), ಸಂಜು (4) ಬೇಗನೆ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಹೆಟ್ ಮೇಯರ್ (35) ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸಮನ್ ಗಳೂ ಸಹ ತಂಡಕ್ಕೆ ಕಾಣಿಕೆ ನೀಡಲಿಲ್ಲ. ಒಟ್ಟಾರೆ 59 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದು ಕೊಂಡಿತು. ಪಾರ್ನೆಲ್ ಗೆ 3 ವಿಕೆಟ್ ಬ್ರೆಸ್ ವೆಲ್ ಮತ್ತೆ ಕರಣ್ ಶರ್ಮಾಗೆ ತಲಾ 2 ವಿಕೆಟ್ ಪಡೆದು ಮಿಂಚಿದರು.
ಮೂರು ವಿಕೆಟ್ ಪಡೆದ ಪಾರ್ನೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…