ಬೆಂಗಳೂರು ತಂಡದ ಉತ್ತಮ ಬೌಲಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವನ್ನು 59 ರನ್ ಗೆ ಆಲ್ ಔಟ್ ಮಾಡಿ 127 ರನ್ ಗಳ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿಯು ಹೋರಾಟದ ಟಾರ್ಗೆಟ್ ನೀಡಿತು. ಆರಂಭಿಕ ಬ್ಯಾಟ್ಸಮನ್ ಗಳ ಅರ್ಧ ಶತಕದ ಜೊತೆಯಾಟದ ನಂತರ ವಿರಾಟ್ ಕೊಹ್ಲಿ ಅವರು ಕೆ.ಎಮ್ ಆಸೀಫ್ ಗೆ ವಿಕೆಟ್ ಒಪ್ಪಿಸಿದರು. ದುಫ಼್ಲೆಸಿಸ್ (55), ಮ್ಯಾಕ್ಸ್ ವೆಲ್ (54), ಅನುಜ್ ರಾವತ್(29) ರವರ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿದರು.
ಟಾರ್ಗೆಟ್ ಬೆನ್ನತ್ತಿದ ರಾಜಸ್ತಾನ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಯಶಸ್ವಿ ಜೈಸ್ವಲ್(0), ಜೋಸ್ ಬಟ್ಲರ್ (0), ಸಂಜು (4) ಬೇಗನೆ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಹೆಟ್ ಮೇಯರ್ (35) ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸಮನ್ ಗಳೂ ಸಹ ತಂಡಕ್ಕೆ ಕಾಣಿಕೆ ನೀಡಲಿಲ್ಲ. ಒಟ್ಟಾರೆ 59 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದು ಕೊಂಡಿತು. ಪಾರ್ನೆಲ್ ಗೆ 3 ವಿಕೆಟ್ ಬ್ರೆಸ್ ವೆಲ್ ಮತ್ತೆ ಕರಣ್ ಶರ್ಮಾಗೆ ತಲಾ 2 ವಿಕೆಟ್ ಪಡೆದು ಮಿಂಚಿದರು.
ಮೂರು ವಿಕೆಟ್ ಪಡೆದ ಪಾರ್ನೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…