ಬೆಂಗಳೂರು ತಂಡದ ಉತ್ತಮ ಬೌಲಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವನ್ನು 59 ರನ್ ಗೆ ಆಲ್ ಔಟ್ ಮಾಡಿ 127 ರನ್ ಗಳ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿಯು ಹೋರಾಟದ ಟಾರ್ಗೆಟ್ ನೀಡಿತು. ಆರಂಭಿಕ ಬ್ಯಾಟ್ಸಮನ್ ಗಳ ಅರ್ಧ ಶತಕದ ಜೊತೆಯಾಟದ ನಂತರ ವಿರಾಟ್ ಕೊಹ್ಲಿ ಅವರು ಕೆ.ಎಮ್ ಆಸೀಫ್ ಗೆ ವಿಕೆಟ್ ಒಪ್ಪಿಸಿದರು. ದುಫ಼್ಲೆಸಿಸ್ (55), ಮ್ಯಾಕ್ಸ್ ವೆಲ್ (54), ಅನುಜ್ ರಾವತ್(29) ರವರ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿದರು.
ಟಾರ್ಗೆಟ್ ಬೆನ್ನತ್ತಿದ ರಾಜಸ್ತಾನ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಯಶಸ್ವಿ ಜೈಸ್ವಲ್(0), ಜೋಸ್ ಬಟ್ಲರ್ (0), ಸಂಜು (4) ಬೇಗನೆ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಹೆಟ್ ಮೇಯರ್ (35) ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸಮನ್ ಗಳೂ ಸಹ ತಂಡಕ್ಕೆ ಕಾಣಿಕೆ ನೀಡಲಿಲ್ಲ. ಒಟ್ಟಾರೆ 59 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದು ಕೊಂಡಿತು. ಪಾರ್ನೆಲ್ ಗೆ 3 ವಿಕೆಟ್ ಬ್ರೆಸ್ ವೆಲ್ ಮತ್ತೆ ಕರಣ್ ಶರ್ಮಾಗೆ ತಲಾ 2 ವಿಕೆಟ್ ಪಡೆದು ಮಿಂಚಿದರು.
ಮೂರು ವಿಕೆಟ್ ಪಡೆದ ಪಾರ್ನೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…