ಬೆಂಗಳೂರು ತಂಡದ ಉತ್ತಮ ಬೌಲಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವನ್ನು 59 ರನ್ ಗೆ ಆಲ್ ಔಟ್ ಮಾಡಿ 127 ರನ್ ಗಳ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿಯು ಹೋರಾಟದ ಟಾರ್ಗೆಟ್ ನೀಡಿತು. ಆರಂಭಿಕ ಬ್ಯಾಟ್ಸಮನ್ ಗಳ ಅರ್ಧ ಶತಕದ ಜೊತೆಯಾಟದ ನಂತರ ವಿರಾಟ್ ಕೊಹ್ಲಿ ಅವರು ಕೆ.ಎಮ್ ಆಸೀಫ್ ಗೆ ವಿಕೆಟ್ ಒಪ್ಪಿಸಿದರು. ದುಫ಼್ಲೆಸಿಸ್ (55), ಮ್ಯಾಕ್ಸ್ ವೆಲ್ (54), ಅನುಜ್ ರಾವತ್(29) ರವರ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿದರು.
ಟಾರ್ಗೆಟ್ ಬೆನ್ನತ್ತಿದ ರಾಜಸ್ತಾನ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಯಶಸ್ವಿ ಜೈಸ್ವಲ್(0), ಜೋಸ್ ಬಟ್ಲರ್ (0), ಸಂಜು (4) ಬೇಗನೆ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಹೆಟ್ ಮೇಯರ್ (35) ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸಮನ್ ಗಳೂ ಸಹ ತಂಡಕ್ಕೆ ಕಾಣಿಕೆ ನೀಡಲಿಲ್ಲ. ಒಟ್ಟಾರೆ 59 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದು ಕೊಂಡಿತು. ಪಾರ್ನೆಲ್ ಗೆ 3 ವಿಕೆಟ್ ಬ್ರೆಸ್ ವೆಲ್ ಮತ್ತೆ ಕರಣ್ ಶರ್ಮಾಗೆ ತಲಾ 2 ವಿಕೆಟ್ ಪಡೆದು ಮಿಂಚಿದರು.
ಮೂರು ವಿಕೆಟ್ ಪಡೆದ ಪಾರ್ನೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…