ಬೆಂಗಳೂರು ತಂಡದ ಉತ್ತಮ ಬೌಲಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವನ್ನು 59 ರನ್ ಗೆ ಆಲ್ ಔಟ್ ಮಾಡಿ 127 ರನ್ ಗಳ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿಯು ಹೋರಾಟದ ಟಾರ್ಗೆಟ್ ನೀಡಿತು. ಆರಂಭಿಕ ಬ್ಯಾಟ್ಸಮನ್ ಗಳ ಅರ್ಧ ಶತಕದ ಜೊತೆಯಾಟದ ನಂತರ ವಿರಾಟ್ ಕೊಹ್ಲಿ ಅವರು ಕೆ.ಎಮ್ ಆಸೀಫ್ ಗೆ ವಿಕೆಟ್ ಒಪ್ಪಿಸಿದರು. ದುಫ಼್ಲೆಸಿಸ್ (55), ಮ್ಯಾಕ್ಸ್ ವೆಲ್ (54), ಅನುಜ್ ರಾವತ್(29) ರವರ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿದರು.
ಟಾರ್ಗೆಟ್ ಬೆನ್ನತ್ತಿದ ರಾಜಸ್ತಾನ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಯಶಸ್ವಿ ಜೈಸ್ವಲ್(0), ಜೋಸ್ ಬಟ್ಲರ್ (0), ಸಂಜು (4) ಬೇಗನೆ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಹೆಟ್ ಮೇಯರ್ (35) ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸಮನ್ ಗಳೂ ಸಹ ತಂಡಕ್ಕೆ ಕಾಣಿಕೆ ನೀಡಲಿಲ್ಲ. ಒಟ್ಟಾರೆ 59 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದು ಕೊಂಡಿತು. ಪಾರ್ನೆಲ್ ಗೆ 3 ವಿಕೆಟ್ ಬ್ರೆಸ್ ವೆಲ್ ಮತ್ತೆ ಕರಣ್ ಶರ್ಮಾಗೆ ತಲಾ 2 ವಿಕೆಟ್ ಪಡೆದು ಮಿಂಚಿದರು.
ಮೂರು ವಿಕೆಟ್ ಪಡೆದ ಪಾರ್ನೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…