ಬೆಂಗಳೂರು ತಂಡದ ಉತ್ತಮ ಬೌಲಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವನ್ನು 59 ರನ್ ಗೆ ಆಲ್ ಔಟ್ ಮಾಡಿ 127 ರನ್ ಗಳ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿಯು ಹೋರಾಟದ ಟಾರ್ಗೆಟ್ ನೀಡಿತು. ಆರಂಭಿಕ ಬ್ಯಾಟ್ಸಮನ್ ಗಳ ಅರ್ಧ ಶತಕದ ಜೊತೆಯಾಟದ ನಂತರ ವಿರಾಟ್ ಕೊಹ್ಲಿ ಅವರು ಕೆ.ಎಮ್ ಆಸೀಫ್ ಗೆ ವಿಕೆಟ್ ಒಪ್ಪಿಸಿದರು. ದುಫ಼್ಲೆಸಿಸ್ (55), ಮ್ಯಾಕ್ಸ್ ವೆಲ್ (54), ಅನುಜ್ ರಾವತ್(29) ರವರ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿದರು.
ಟಾರ್ಗೆಟ್ ಬೆನ್ನತ್ತಿದ ರಾಜಸ್ತಾನ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಯಶಸ್ವಿ ಜೈಸ್ವಲ್(0), ಜೋಸ್ ಬಟ್ಲರ್ (0), ಸಂಜು (4) ಬೇಗನೆ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಹೆಟ್ ಮೇಯರ್ (35) ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸಮನ್ ಗಳೂ ಸಹ ತಂಡಕ್ಕೆ ಕಾಣಿಕೆ ನೀಡಲಿಲ್ಲ. ಒಟ್ಟಾರೆ 59 ರನ್ ಗೆ ತನ್ನ ಎಲ್ಲಾ ವಿಕೆಟ್ ಕಳೆದು ಕೊಂಡಿತು. ಪಾರ್ನೆಲ್ ಗೆ 3 ವಿಕೆಟ್ ಬ್ರೆಸ್ ವೆಲ್ ಮತ್ತೆ ಕರಣ್ ಶರ್ಮಾಗೆ ತಲಾ 2 ವಿಕೆಟ್ ಪಡೆದು ಮಿಂಚಿದರು.
ಮೂರು ವಿಕೆಟ್ ಪಡೆದ ಪಾರ್ನೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…