ದೊಡ್ಡಬಳ್ಳಾಪುರ: ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಲಕ್ಷ್ಮಮ್ಮನವರು ಸಂಬಂಧಿಕರಿಗಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ, ಹಣ ಇಲ್ಲದೆ ರೈತರ ಕೆಲಸ ಮಾಡಿಕೊಡುತ್ತಿಲ್ಲವೆಂದು ಗ್ರಾಮಸ್ಥರು ಆರೋಪ ಮಾಡಿದ್ದು, ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ಲಕ್ಷ್ಮಮ್ಮರನ್ನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ರೆವಿನ್ಯೂ ಇನ್ಸ್ಪೆಕ್ಟರ್ (ರಾಜಸ್ವ ನಿರೀಕ್ಷಕರು) ಆಗಿ ಲಕ್ಷ್ಮಮ್ಮ.ಆರ್ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಅವರ ನಾಲ್ಕು ವರ್ಷಗಳ ಅವಧಿ ಭ್ರಷ್ಟಾಚಾರದಿಂದ ಕೂಡಿದೆ ಎಂಬುದು ರೈತರ ಆರೋಪವಾಗಿದೆ. ಅಕ್ರಮ ಖಾತೆಗಳನ್ನ ಮಾಡಿರುವುದು, ಸರ್ಕಾರಿ ಸವಲತ್ತುಗಳಾದ ಪಿಂಚಣಿ ಮಾಡಿಕೊಡಲು ಸಹ ಬಡವರಿಂದ ಹಣ ಕೇಳುತ್ತಾರೆ, ಅಕ್ರಮ ಸಕ್ರಮಕ್ಕಾಗಿ ಫಾರಂ ನಂಬರ್ 53 ಅರ್ಜಿ ಹಾಕಿದ ರೈತರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ, ಭೂಮಿ ಇರುವರಿಗೇ ಗೋಮಾಳ ಜಾಗವನ್ನು ಮಂಜೂರು ಮಾಡಿದ್ದಾರೆಂಬುದು ರೈತರ ಆರೋಪವಾಗಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ಲಕ್ಷ್ಮಮ್ಮರನ್ನ ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ, ಸರ್ಕಾರದ ಕ್ರಮದಿಂದ ಸ್ಥಳೀಯ ರೈತರು ಸಂತಸಗೊಂಡಿದ್ದರು, ಆದರೆ ಲಕ್ಷ್ಮಮ್ಮ ಮತ್ತೆ ಇದೇ ಹುದ್ದೆಗೆ ಬರಲು ಕೋರ್ಟ್ ಮೂಲಕ ತಡೆ ತಂದಿದ್ದಾರೆ, ಲಕ್ಷ್ಮಮ್ಮ ಮತ್ತೆ ತೂಬಗೆರೆಗೆ ಬರುವುದು ಬೇಡ ಎನ್ನುವುದು ಸ್ಥಳೀಯ ರೈತರ ಬೇಡಿಕೆ, ಲಕ್ಷ್ಮಮ್ಮರನ್ನ ತೂಬಗೆರೆ ಕಚೇರಿಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕೊಟ್ಟಿದ್ದಾರೆ, ಇದರ ಜೊತೆಗೆ ಲಕ್ಷ್ಮಮ್ಮರವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ರೈತರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…