ದೊಡ್ಡಬಳ್ಳಾಪುರ: ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಲಕ್ಷ್ಮಮ್ಮನವರು ಸಂಬಂಧಿಕರಿಗಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ, ಹಣ ಇಲ್ಲದೆ ರೈತರ ಕೆಲಸ ಮಾಡಿಕೊಡುತ್ತಿಲ್ಲವೆಂದು ಗ್ರಾಮಸ್ಥರು ಆರೋಪ ಮಾಡಿದ್ದು, ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ಲಕ್ಷ್ಮಮ್ಮರನ್ನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ರೆವಿನ್ಯೂ ಇನ್ಸ್ಪೆಕ್ಟರ್ (ರಾಜಸ್ವ ನಿರೀಕ್ಷಕರು) ಆಗಿ ಲಕ್ಷ್ಮಮ್ಮ.ಆರ್ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಅವರ ನಾಲ್ಕು ವರ್ಷಗಳ ಅವಧಿ ಭ್ರಷ್ಟಾಚಾರದಿಂದ ಕೂಡಿದೆ ಎಂಬುದು ರೈತರ ಆರೋಪವಾಗಿದೆ. ಅಕ್ರಮ ಖಾತೆಗಳನ್ನ ಮಾಡಿರುವುದು, ಸರ್ಕಾರಿ ಸವಲತ್ತುಗಳಾದ ಪಿಂಚಣಿ ಮಾಡಿಕೊಡಲು ಸಹ ಬಡವರಿಂದ ಹಣ ಕೇಳುತ್ತಾರೆ, ಅಕ್ರಮ ಸಕ್ರಮಕ್ಕಾಗಿ ಫಾರಂ ನಂಬರ್ 53 ಅರ್ಜಿ ಹಾಕಿದ ರೈತರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ, ಭೂಮಿ ಇರುವರಿಗೇ ಗೋಮಾಳ ಜಾಗವನ್ನು ಮಂಜೂರು ಮಾಡಿದ್ದಾರೆಂಬುದು ರೈತರ ಆರೋಪವಾಗಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ಲಕ್ಷ್ಮಮ್ಮರನ್ನ ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ, ಸರ್ಕಾರದ ಕ್ರಮದಿಂದ ಸ್ಥಳೀಯ ರೈತರು ಸಂತಸಗೊಂಡಿದ್ದರು, ಆದರೆ ಲಕ್ಷ್ಮಮ್ಮ ಮತ್ತೆ ಇದೇ ಹುದ್ದೆಗೆ ಬರಲು ಕೋರ್ಟ್ ಮೂಲಕ ತಡೆ ತಂದಿದ್ದಾರೆ, ಲಕ್ಷ್ಮಮ್ಮ ಮತ್ತೆ ತೂಬಗೆರೆಗೆ ಬರುವುದು ಬೇಡ ಎನ್ನುವುದು ಸ್ಥಳೀಯ ರೈತರ ಬೇಡಿಕೆ, ಲಕ್ಷ್ಮಮ್ಮರನ್ನ ತೂಬಗೆರೆ ಕಚೇರಿಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕೊಟ್ಟಿದ್ದಾರೆ, ಇದರ ಜೊತೆಗೆ ಲಕ್ಷ್ಮಮ್ಮರವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ರೈತರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…