ದೊಡ್ಡಬಳ್ಳಾಪುರ: ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಲಕ್ಷ್ಮಮ್ಮನವರು ಸಂಬಂಧಿಕರಿಗಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ, ಹಣ ಇಲ್ಲದೆ ರೈತರ ಕೆಲಸ ಮಾಡಿಕೊಡುತ್ತಿಲ್ಲವೆಂದು ಗ್ರಾಮಸ್ಥರು ಆರೋಪ ಮಾಡಿದ್ದು, ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ಲಕ್ಷ್ಮಮ್ಮರನ್ನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ರೆವಿನ್ಯೂ ಇನ್ಸ್ಪೆಕ್ಟರ್ (ರಾಜಸ್ವ ನಿರೀಕ್ಷಕರು) ಆಗಿ ಲಕ್ಷ್ಮಮ್ಮ.ಆರ್ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಅವರ ನಾಲ್ಕು ವರ್ಷಗಳ ಅವಧಿ ಭ್ರಷ್ಟಾಚಾರದಿಂದ ಕೂಡಿದೆ ಎಂಬುದು ರೈತರ ಆರೋಪವಾಗಿದೆ. ಅಕ್ರಮ ಖಾತೆಗಳನ್ನ ಮಾಡಿರುವುದು, ಸರ್ಕಾರಿ ಸವಲತ್ತುಗಳಾದ ಪಿಂಚಣಿ ಮಾಡಿಕೊಡಲು ಸಹ ಬಡವರಿಂದ ಹಣ ಕೇಳುತ್ತಾರೆ, ಅಕ್ರಮ ಸಕ್ರಮಕ್ಕಾಗಿ ಫಾರಂ ನಂಬರ್ 53 ಅರ್ಜಿ ಹಾಕಿದ ರೈತರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ, ಭೂಮಿ ಇರುವರಿಗೇ ಗೋಮಾಳ ಜಾಗವನ್ನು ಮಂಜೂರು ಮಾಡಿದ್ದಾರೆಂಬುದು ರೈತರ ಆರೋಪವಾಗಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ಲಕ್ಷ್ಮಮ್ಮರನ್ನ ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ, ಸರ್ಕಾರದ ಕ್ರಮದಿಂದ ಸ್ಥಳೀಯ ರೈತರು ಸಂತಸಗೊಂಡಿದ್ದರು, ಆದರೆ ಲಕ್ಷ್ಮಮ್ಮ ಮತ್ತೆ ಇದೇ ಹುದ್ದೆಗೆ ಬರಲು ಕೋರ್ಟ್ ಮೂಲಕ ತಡೆ ತಂದಿದ್ದಾರೆ, ಲಕ್ಷ್ಮಮ್ಮ ಮತ್ತೆ ತೂಬಗೆರೆಗೆ ಬರುವುದು ಬೇಡ ಎನ್ನುವುದು ಸ್ಥಳೀಯ ರೈತರ ಬೇಡಿಕೆ, ಲಕ್ಷ್ಮಮ್ಮರನ್ನ ತೂಬಗೆರೆ ಕಚೇರಿಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕೊಟ್ಟಿದ್ದಾರೆ, ಇದರ ಜೊತೆಗೆ ಲಕ್ಷ್ಮಮ್ಮರವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ರೈತರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…