Revenue inspector: ಸಂಬಂಧಿಕರಿಗಾಗಿ ತೂಬಗೆರೆ ರೆವಿನ್ಯೂ ಇನ್ಸ್‌ಪೆಕ್ಟರ್ ಅಧಿಕಾರ ದುರುಪಯೋಗ ಆರೋಪ: ರೆವಿನ್ಯೂ ಇನ್ಸ್‌ಪೆಕ್ಟರ್ ಲಕ್ಷಮ್ಮರನ್ನ ತೂಬಗೆರೆ ಉಪ ತಹಶೀಲ್ದಾರ್ ಕಚೇರಿಯಿಂದ ಬಿಡುಗಡೆ ಮಾಡುವಂತೆ ರೈತರ ಒತ್ತಾಯ

ದೊಡ್ಡಬಳ್ಳಾಪುರ: ತೂಬಗೆರೆ ರೆವಿನ್ಯೂ ಇನ್ಸ್‌ಪೆಕ್ಟರ್ ಲಕ್ಷ್ಮಮ್ಮನವರು ಸಂಬಂಧಿಕರಿಗಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ, ಹಣ ಇಲ್ಲದೆ ರೈತರ ಕೆಲಸ ಮಾಡಿಕೊಡುತ್ತಿಲ್ಲವೆಂದು ಗ್ರಾಮಸ್ಥರು ಆರೋಪ ಮಾಡಿದ್ದು, ತೂಬಗೆರೆ ರೆವಿನ್ಯೂ ಇನ್ಸ್‌ಪೆಕ್ಟರ್ ಹುದ್ದೆಯಿಂದ ಲಕ್ಷ್ಮಮ್ಮರನ್ನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ರೆವಿನ್ಯೂ ಇನ್ಸ್‌ಪೆಕ್ಟರ್ (ರಾಜಸ್ವ ನಿರೀಕ್ಷಕರು) ಆಗಿ ಲಕ್ಷ್ಮಮ್ಮ.ಆರ್ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಅವರ ನಾಲ್ಕು ವರ್ಷಗಳ ಅವಧಿ ಭ್ರಷ್ಟಾಚಾರದಿಂದ ಕೂಡಿದೆ ಎಂಬುದು ರೈತರ ಆರೋಪವಾಗಿದೆ. ಅಕ್ರಮ ಖಾತೆಗಳನ್ನ ಮಾಡಿರುವುದು, ಸರ್ಕಾರಿ ಸವಲತ್ತುಗಳಾದ ಪಿಂಚಣಿ ಮಾಡಿಕೊಡಲು ಸಹ ಬಡವರಿಂದ ಹಣ ಕೇಳುತ್ತಾರೆ, ಅಕ್ರಮ ಸಕ್ರಮಕ್ಕಾಗಿ ಫಾರಂ ನಂಬರ್ 53 ಅರ್ಜಿ ಹಾಕಿದ ರೈತರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ, ಭೂಮಿ ಇರುವರಿಗೇ ಗೋಮಾಳ ಜಾಗವನ್ನು ಮಂಜೂರು ಮಾಡಿದ್ದಾರೆಂಬುದು ರೈತರ ಆರೋಪವಾಗಿದೆ.

ಲಕ್ಷಮ್ಮರವರದ್ದು ತೂಬಗೆರೆಯ ಗಂಡರಾಜಪುರ ಗ್ರಾಮದವರಾಗಿದ್ದು, ತೂಬಗೆರೆ ಹೋಬಳಿಯಲ್ಲಿ ಅವರ ಸಂಬಂಧಿಕರು ಇದ್ದಾರೆ, ದಂಡುದಾಸನ ಕೋಡಿಗೆಹಳ್ಳಿಯ ಕೃಷ್ಣಪ್ಪನವರು ಕಳೆದ 50 ವರ್ಷಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದಾರೆ, ಜಮೀನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು, ಆದರೆ ಇದೇ ಗ್ರಾಮದಲ್ಲಿ ಲಕ್ಷ್ಮಮ್ಮರವರ ಅಕ್ಕ ವಾಸವಾಗಿದ್ದಾರೆ, ಅವರ ಅಕ್ಕನ ಗಂಡನಾದ ನಾರಾಯಣಸ್ವಾಮಿ ಒಂದು ತಿಂಗಳ ಹಿಂದೆಯಷ್ಟೇ ಅರ್ಜಿ ಹಾಕಿದ್ದು, ಅಕ್ರಮ ದಾಖಲೆ ಸೃಷ್ಟಿಸಿ ಒಂದು ತಿಂಗಳಲ್ಲೇ ಜಮೀನು ಮಂಜೂರು ಮಾಡುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪ ಮಾಡಿದ್ದಾರೆ.

ಆಡಳಿತಾತ್ಮಕ ಹಿತದೃಷ್ಟಿಯಿಂದ ಲಕ್ಷ್ಮಮ್ಮರನ್ನ ತೂಬಗೆರೆ ರೆವಿನ್ಯೂ ಇನ್ಸ್‌ಪೆಕ್ಟರ್ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ, ಸರ್ಕಾರದ ಕ್ರಮದಿಂದ ಸ್ಥಳೀಯ ರೈತರು ಸಂತಸಗೊಂಡಿದ್ದರು, ಆದರೆ ಲಕ್ಷ್ಮಮ್ಮ ಮತ್ತೆ ಇದೇ ಹುದ್ದೆಗೆ ಬರಲು ಕೋರ್ಟ್ ಮೂಲಕ ತಡೆ ತಂದಿದ್ದಾರೆ, ಲಕ್ಷ್ಮಮ್ಮ ಮತ್ತೆ ತೂಬಗೆರೆಗೆ ಬರುವುದು ಬೇಡ ಎನ್ನುವುದು ಸ್ಥಳೀಯ ರೈತರ ಬೇಡಿಕೆ, ಲಕ್ಷ್ಮಮ್ಮರನ್ನ ತೂಬಗೆರೆ ಕಚೇರಿಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕೊಟ್ಟಿದ್ದಾರೆ, ಇದರ ಜೊತೆಗೆ ಲಕ್ಷ್ಮಮ್ಮರವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ರೈತರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

15 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

19 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago